ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…