ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…