ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…