ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…