ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆ.ಜಿ. ಗಂಧದ ಮರದ ತುಂಡುಗಳು, ಕೃತ್ಯಕ್ಕೆ ಬಳಸಿದ್ದ ಪೆಟ್ರೋಲ್ ಚಾಲಿತ ಗರಗಸ ಹಾಗೂ ಒಂದು ಸ್ಯಾಂಟ್ರೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಎಂದು ಗುರುತಿಸಲಾಗಿದೆ. ಇಬ್ಬರೂ ಬಿದಿರು ಬುಟ್ಟಿ ತಯಾರಿಕೆ ಕೆಲಸ ಮಾಡುತ್ತಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವೆಂಕಟೇಶ್ ವಿರುದ್ಧ ಈ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.
ಜೂನ್ 13ರಂದು ಮಧ್ಯರಾತ್ರಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಛೇರಿಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಒಂದು ಗಂಧದ ಮರ ಹಾಗೂ ದರ್ಗಾ ಮೊಹಲ್ಲಾದ ಸ್ಮಶಾನದ ಆವರಣದಲ್ಲಿದ್ದ ಮತ್ತೊಂದು ಗಂಧದ ಮರವನ್ನು ಕಳ್ಳರು ಕಡಿದು ಕಳವು ಮಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಚಲನವಲನಗಳನ್ನು ಪತ್ತೆಹಚ್ಚಿದರು. ಕಳವು ಮಾಡಿದ್ದ ಗಂಧದ ಮರದ ತುಂಡುಗಳನ್ನು ಸ್ಯಾಂಟ್ರೋ ಕಾರಿನಲ್ಲಿ ಸಾಗಿಸಿ ಕುರುಬರಹಳ್ಳಿ ಸಮೀಪ ಅಡಗಿಸಿಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಎಸ್ಪಿ ಚಂದ್ರಕಾಂತ್ ಎಂ.ವಿ ಸೂಚನೆಯಂತೆ ನಗರ ಠಾಣಾ ಪ್ರಭಾರ ಇನ್ಸ್ ಪೆಕ್ಟರ್ ಮುತ್ತುರಾಜ್ ಎಚ್ ನೇತೃತ್ವದಲ್ಲಿ ಕೃಷ್ಣಮೂರ್ತಿ, ಪಾಂಡುರಂಗ, ಹುಸೇನ್ ಸಾಬ್, ಶಿವಾನಂದ್, ಪ್ರದೀಪ್, ಮುನಿರಾಜ್, ರೂಪೇಶ್ ಯಾದವ್, ರೇಖಾ ರವರ ತಂಡ ರಚನೆ ಮಾಡಲಾಗಿತ್ತು.
ಸೂಕ್ತ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 254 ಕೆ.ಜಿ. ಗಂಧದ ಮರದ ತುಂಡುಗಳು, ಪೆಟ್ರೋಲ್ ಚಾಲಿತ ಗರಗಸ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…
ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…
ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ…