ಗಂಧದ ಮರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ: ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆಜಿ ತೂಕದ ಗಂಧದ ತುಂಡುಗಳ ವಶ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆ.ಜಿ. ಗಂಧದ ಮರದ ತುಂಡುಗಳು, ಕೃತ್ಯಕ್ಕೆ ಬಳಸಿದ್ದ ಪೆಟ್ರೋಲ್ ಚಾಲಿತ ಗರಗಸ ಹಾಗೂ ಒಂದು ಸ್ಯಾಂಟ್ರೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಎಂದು ಗುರುತಿಸಲಾಗಿದೆ. ಇಬ್ಬರೂ ಬಿದಿರು ಬುಟ್ಟಿ ತಯಾರಿಕೆ ಕೆಲಸ ಮಾಡುತ್ತಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವೆಂಕಟೇಶ್ ವಿರುದ್ಧ ಈ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

ಜೂನ್ 13ರಂದು ಮಧ್ಯರಾತ್ರಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಛೇರಿಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಒಂದು ಗಂಧದ ಮರ ಹಾಗೂ ದರ್ಗಾ ಮೊಹಲ್ಲಾದ ಸ್ಮಶಾನದ ಆವರಣದಲ್ಲಿದ್ದ ಮತ್ತೊಂದು ಗಂಧದ ಮರವನ್ನು ಕಳ್ಳರು ಕಡಿದು ಕಳವು ಮಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಚಲನವಲನಗಳನ್ನು ಪತ್ತೆಹಚ್ಚಿದರು. ಕಳವು ಮಾಡಿದ್ದ ಗಂಧದ ಮರದ ತುಂಡುಗಳನ್ನು ಸ್ಯಾಂಟ್ರೋ ಕಾರಿನಲ್ಲಿ ಸಾಗಿಸಿ ಕುರುಬರಹಳ್ಳಿ ಸಮೀಪ ಅಡಗಿಸಿಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಎಸ್ಪಿ ಚಂದ್ರಕಾಂತ್ ಎಂ.ವಿ ಸೂಚನೆಯಂತೆ ನಗರ ಠಾಣಾ ಪ್ರಭಾರ ಇನ್ಸ್ ಪೆಕ್ಟರ್ ಮುತ್ತುರಾಜ್ ಎಚ್‌ ನೇತೃತ್ವದಲ್ಲಿ ಕೃಷ್ಣಮೂರ್ತಿ, ಪಾಂಡುರಂಗ, ಹುಸೇನ್ ಸಾಬ್, ಶಿವಾನಂದ್, ಪ್ರದೀಪ್, ಮುನಿರಾಜ್, ರೂಪೇಶ್ ಯಾದವ್, ರೇಖಾ ರವರ ತಂಡ ರಚನೆ ಮಾಡಲಾಗಿತ್ತು.

ಸೂಕ್ತ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 254 ಕೆ.ಜಿ. ಗಂಧದ ಮರದ ತುಂಡುಗಳು, ಪೆಟ್ರೋಲ್ ಚಾಲಿತ ಗರಗಸ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

15 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago