ಕೋಲಾರ: ಹದೆಗೆಟ್ಟಿರುವ ಗಡಿಭಾಗದ ಕದರಿನತ್ತ ರಸ್ತೆಗೆ ಮುಕ್ತಿ ನೀಡಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕೆಂದು ಆ-೨೦ ರ ಮಂಗಳವಾರ ಶಾಸಕರ ಮನೆ ಮುಂದೆ ಹೋರಾಟ ನಡೆಸಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಹದಗೆಟ್ಟಿರುವ ಬಂಗಾರಪೇಟೆ ಗಡಿಭಾಗದ ಕದರಿನತ್ತ ಗ್ರಾಮದ ರಸ್ತೆಯಲ್ಲಿ ಸೇರಿದ್ದ ಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು, ಹತ್ತಾರು ವರ್ಷಗಳಿಂದ ಅತೀ ಹೆಚ್ಚಾಗಿ ಕಾಡಾಣೆಗಳ ಹಾವಳಿಯಿಂದ ತತ್ತರಿಸಿರುವ ಗಡಿಭಾಗದ ರಸ್ತೆಗಳಿಗೆ ಮುಕ್ತಿ ನೀಡಲು ಸಂಬಂಧಪಟ್ಟ ಶಾಸಕರು ಅಧಿಕಾರಿಗಳು ವಿಫಲವಾಗಿ ಹತ್ತಾರು ವರ್ಷಗಳಿಂದ ಹದಗೆಟ್ಟಿರುವ ರಸ್ತೆಯಲ್ಲಿಯೇ ಜೀವವನ್ನು ಅಂಗೈನಲ್ಲಿಟ್ಟುಕೊಂಡು ಓಡಾಡಬೇಕಾದ ಪರಿಸ್ತಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ತಾಲ್ಲೂಕು ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಪ್ಪೋಜಿರಾವ್ ಮಾತನಾಡಿ, ಕಳೆದ ವಿಧಾನ ಸಭಾ ಚುನಾವಣೆ ಸಮಯದಲ್ಲಿ ಚುನಾವಣಾ ಬಹಿಷ್ಕಾರ ನಿರ್ದಾರ ಕೈಗೊಂಡ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಗಳನ್ನು ಆಲಿಸಿ ಪ್ರಮುಖವಾಗಿ ಕಾಳಮ್ಮ ಗುಡಿಯಿಂದ ಕದರಿನತ್ತವರೆಗೆ ಹದಗೆಟ್ಟಿರುವ ರಸ್ತೆಯನ್ನು ನೋಡಿ ಅಧಿಕಾರಿಗಳೇ ಬೇಸರ ವ್ಯಕ್ತಪಡಿಸಿ ಸಂಬಂಧಪಟ್ಟ ಪಂಚಾಯತ್ ರಾಜ್ ಅಧಿಕಾರಿಗಳಿಗೆ ಕರೆ ಮಾಡಿ ಚುನಾವಣೆ ಮುಗಿದ ನಂತರ ಸರಿಪಡಿಸುತ್ತೇವೆಂದು ಮಾತು ಕೊಟ್ಟು ಹೋದ ಆಧಿಕಾರಿಗಳು ವರ್ಷ ಕಳೆದರೂ ಸಮಸ್ಯೆ ಕಡೆ ಗಮನ ಹರಿಸುತ್ತಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು.
ಸಂವಿಧಾನದ ಅಡಿಯಲ್ಲಿ ಇರುವ ನಾವು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಂದ ಆಯ್ಕೆ ಆದ ಜನ ಪ್ರತಿನಿಧಿಗಳು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸಬೇಕು ಚುನಾವಣೆಯಲ್ಲಿ ಗಡಿಭಾಗದ ಕದರಿನತ್ತ ಗ್ರಾಮದಲ್ಲಿ ನಮಗೆ ಹೆಚ್ಚಿನ ಮತ ಬಂದಿಲ್ಲ ಎಂಬ ಒಂದೇ ಒಂದು ಕಾರಣದಿಂದ ಮೂಲಭೂತ ಸೌಕರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡದೇ ಇರುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.
ಒಂದು ಕಡೆ ಕಾಡಾಣೆಗಳ ಆವಳಿಯಿಂದ ರಾತ್ರಿವೇಳೆ ಭಯಭೀತರಾಗಿ ಜೀವವನ್ನು ಅಂಗೈನಲ್ಲಿಟ್ಟುಕೊಂಡು ಹದಗೆಟ್ಟಿರುವ ರಸ್ತೆಯಲ್ಲಿ ಓಡಾಡುತ್ತಿದ್ದರು ಕನಿಷ್ಠ ಸಮಸ್ಯೆ ಬಗ್ಗೆ ಏಕೆ ಗಂಭೀರತೆ ತೆಗೆದುಕೊಳ್ಳುತ್ತಿಲ್ಲ . ಇನ್ನೆಷ್ಟು ಅಮಾಯಕರ ಪ್ರಾಣ ಹಾಗು ಕೈಕಾಲುಗಳನ್ನು ಕಳೆದುಕೊಂಡು ಅಂಗವಿಕಲರಾಗಿರುವ ಸಂಸಾರಗಳನ್ನು ಹಾಳು ಮಾಡಬೇಕಾಗಿದೆ.ರಾತ್ರಿ ವೇಳೆ ರಸ್ತೆಗಳಲ್ಲಿ ವಿದ್ಯುತ್ ದೀಪಗಳಲ್ಲಿದೇ ಹಳ್ಳಗಳು ಕಾಣಿಸದೇ ಅಪಘಾತಗಳಾಗಿ ಕುಟುಂಬದ ನಿರ್ವಹಣೆ ಮಾಡುವ ನೂರಾರು ಹಿರಿಯರು , ಕಿರಿಯರು , ಯುವಕರು, ಅಂಗವಿಲಕರಾಗುತ್ತಿದ್ದರೂ ಮಾತು ಬಾರದ ತಾಲ್ಲೂಕು ಆಡಳಿತ ಹಾಗೂ ಸಮಸ್ಯೆ ಕಡೆ ಗಮನ ಹರಿಸದ ಶಾಸಕರಿಗೆ ಸಮಸ್ಯೆಗಳನ್ನು ಮನವರಿಕೆ ಮಾಡಲು ಆ-೨೦ ರ ಮಂಗಳವಾರ ಆನೆಗಳ ಸಮೇತ ಮನೆ ಮುತ್ತಿಗೆ ಹಾಕಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮುನಿರಾಜು, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಮಂಗಸಂದ್ರ ತಿಮ್ಮಣ್ಣ, ಗೋವಿಂದಪ್ಪ, ವಿಶ್ವ, ಶ್ರೀರಾಮಪ್ಪ, ಗುಲ್ಲಟ್ಟಿ ರಾಮಶೆಟ್ಟಿ , ಸುರೇಶ್, ನಾಗರಾಜಪ್ಪ, ಚಾಂದ್ಪಾಷ, ಕಿರಣ್, ಮುಂತಾದವರುಗಳು ಇದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…