ದೇವನಹಳ್ಳಿ : ಹಂದರಹಳ್ಳಿ ಗ್ರಾಮದಲ್ಲಿ ಒತ್ತುವರಿ ಆಗಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಮೀನು ತೆರವು ಮಾಡುವವರೆಗೆ ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆ.ಎಂ ಸಂದೇಶ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂದರಹಳ್ಳಿ ಗ್ರಾಮದಲ್ಲಿನ ಕಾರ್ಯನಿರ್ವಾಹಕ ಅಧಿಕಾರಿ ಹೆಸರಿನಲ್ಲಿರುವ 7 ಎಕರೆ 20 ಗುಂಟೆ ಜಮೀನು ಗಡಿ ಗುರುತಿಸಿ, ಒತ್ತುವರಿ ಆಗಿರುವ ಜಮೀನು ತೆರವು ಮಾಡುವಂತೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಜಮೀನು ಉಳಿಸಲು ಗ್ರಾಮಸ್ಥರು ಚಳಿ,ಗಾಳಿ ಎನ್ನದೇ ಕೆಟ್ಟ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಆದರೆ ಅಧಿಕಾರಿಗಳು ಬೆಚ್ಚಗೆ ಮನೆಯಲ್ಲಿ ಮಲಗಿಕೊಂಡಿದ್ದಾರೆ. ಸರ್ವೇ ಅಧಿಕಾರಿಗಳು ಕಾಟಾಚಾರಕ್ಕೆ ಸರ್ವೇ ಮಾಡಿಕೊಂಡು ಹೋಗುತ್ತಾರೆ. ಗಡಿ ಗುರುತಿಸಲು ಜೆಸಿಬಿ ಇಲ್ಲ ಎಂದು ಬೇಜವಾಬ್ದಾರಿತನ ತೋರುತ್ತಿದ್ದಾರೆ. ಗಡಿ ಗುರುತಿಸಿ ಒತ್ತುವರಿ ತೆರವು ಆಗುವ ವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜು, ಶ್ರೀ ಓಂಕಾರ ಸೇವಾ ಟ್ರಸ್ಟ್ ಅಧ್ಯಕ್ಷ ಮುನಿಯಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…