ದೇವನಹಳ್ಳಿ : ಹಂದರಹಳ್ಳಿ ಗ್ರಾಮದಲ್ಲಿ ಒತ್ತುವರಿ ಆಗಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಮೀನು ತೆರವು ಮಾಡುವವರೆಗೆ ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆ.ಎಂ ಸಂದೇಶ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂದರಹಳ್ಳಿ ಗ್ರಾಮದಲ್ಲಿನ ಕಾರ್ಯನಿರ್ವಾಹಕ ಅಧಿಕಾರಿ ಹೆಸರಿನಲ್ಲಿರುವ 7 ಎಕರೆ 20 ಗುಂಟೆ ಜಮೀನು ಗಡಿ ಗುರುತಿಸಿ, ಒತ್ತುವರಿ ಆಗಿರುವ ಜಮೀನು ತೆರವು ಮಾಡುವಂತೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಜಮೀನು ಉಳಿಸಲು ಗ್ರಾಮಸ್ಥರು ಚಳಿ,ಗಾಳಿ ಎನ್ನದೇ ಕೆಟ್ಟ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಆದರೆ ಅಧಿಕಾರಿಗಳು ಬೆಚ್ಚಗೆ ಮನೆಯಲ್ಲಿ ಮಲಗಿಕೊಂಡಿದ್ದಾರೆ. ಸರ್ವೇ ಅಧಿಕಾರಿಗಳು ಕಾಟಾಚಾರಕ್ಕೆ ಸರ್ವೇ ಮಾಡಿಕೊಂಡು ಹೋಗುತ್ತಾರೆ. ಗಡಿ ಗುರುತಿಸಲು ಜೆಸಿಬಿ ಇಲ್ಲ ಎಂದು ಬೇಜವಾಬ್ದಾರಿತನ ತೋರುತ್ತಿದ್ದಾರೆ. ಗಡಿ ಗುರುತಿಸಿ ಒತ್ತುವರಿ ತೆರವು ಆಗುವ ವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜು, ಶ್ರೀ ಓಂಕಾರ ಸೇವಾ ಟ್ರಸ್ಟ್ ಅಧ್ಯಕ್ಷ ಮುನಿಯಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…