ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಈ ಘಟನೆ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ಕಿಡಿಕಾರಿದ್ದಾರೆ.
ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಹೇಳಿದ್ದಾರೆ.
ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…