ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಈ ಘಟನೆ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ಕಿಡಿಕಾರಿದ್ದಾರೆ.
ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಹೇಳಿದ್ದಾರೆ.
ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…
ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…