ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಈ ಘಟನೆ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ಕಿಡಿಕಾರಿದ್ದಾರೆ.
ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಹೇಳಿದ್ದಾರೆ.
ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…