ಗಣಪತಿ ಹಾಗೂ ತಾಯಿ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ

ತಾಲೂಕಿನ ಕೊನಘಟ್ಟ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಶ್ರೀ ದೊಡ್ಡಮ್ಮ ತಾಯಿ ಯುವಕರ ಬಳಗ, ಓಂಶಕ್ತಿ ಸೇವಾ ಟ್ರಸ್ಟ್ ಹಾಗೂ ಶ್ರೀ ವೀರಭದ್ರಸ್ವಾಮಿ ಭಜನಾ ಮಂಡಲಿ ಯವರ ನೇತೃತ್ವದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಗಣಪತಿ ಹಾಗೂ ತಾಯಿ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ ಮಾಡಿ ವಿವಿಧ ಫಲ‌ ಪುಷ್ಪಗಳಿಂದ ಅಲಂಕರಿಸಿ ವಿಜೃಂಭಣೆಯಿಂದ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು.

ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕೊನಘಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಎಲ್ ಆರಾಧ್ಯ, ಭಾಗ್ಯಮ್ಮ ಸುಬ್ಬಣ್ಣ, ಜ್ಯೋತಿ ರಮೇಶ್ ಹಾಗೂ ಕೆ ಎಂ ರಾಮಾಂಜಿನಪ್ಪನವರು ಮತ್ತು ಹಾಲಿನ ಡೈರಿ ನಿರ್ದೇಶಕರು, ಊರಿನ ಮುಖಂಡರಾದ ಶ್ರೀನಿವಾಸ ಶೆಟ್ಟಿ ಹಾಗೂ ದೊಡ್ಡಬಚ್ಚಪ್ಪನವರು ಸೇರಿದಂತೆ ಊರಿನ ಸಮಸ್ತ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತೆಯ ದರ್ಶನ ಪಡೆದು ಪುನೀತರಾದರು.

ದೇವಾಲಯದ ಅರ್ಚಕರಾದ ಪಾಪೇಗೌಡರು ಮಾತನಾಡಿ, ಅನಾದಿಕಾಲದಿಂದಲೂ ದೇವಿಯರ ಪ್ರತಿಷ್ಟಾಪನೆ ಕಾರ್ಯ ನೆಡೆಯುತ್ತಿದ್ದು, ಈ ಭಾಗದ ಜನರು ಆರೋಗ್ಯವಾಗಿರಲೆಂದು ಹಾಗೂ ಮಾತೆಯ ಕೃಪೆಯಿಂದ ಈ ಭಾಗಗಳಲ್ಲಿ ಮಳೆ ಬೆಳೆಗಳು ಚೆನ್ನಾಗಿ ಆಗಲೆಂದು ಸಮಸ್ತ ನಾಡಿನ ಜನತೆಗೆ ಆಯುರಾರೋಗ್ಯ ನೀಡಲೆಂದು ದೇವರಲ್ಲಿ ಕೇಳಿಕೊಂಡರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

26 minutes ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

1 hour ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

2 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

11 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

11 hours ago