ತಾಲೂಕಿನ ಕೊನಘಟ್ಟ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಶ್ರೀ ದೊಡ್ಡಮ್ಮ ತಾಯಿ ಯುವಕರ ಬಳಗ, ಓಂಶಕ್ತಿ ಸೇವಾ ಟ್ರಸ್ಟ್ ಹಾಗೂ ಶ್ರೀ ವೀರಭದ್ರಸ್ವಾಮಿ ಭಜನಾ ಮಂಡಲಿ ಯವರ ನೇತೃತ್ವದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಗಣಪತಿ ಹಾಗೂ ತಾಯಿ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ ಮಾಡಿ ವಿವಿಧ ಫಲ ಪುಷ್ಪಗಳಿಂದ ಅಲಂಕರಿಸಿ ವಿಜೃಂಭಣೆಯಿಂದ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು.
ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕೊನಘಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಎಲ್ ಆರಾಧ್ಯ, ಭಾಗ್ಯಮ್ಮ ಸುಬ್ಬಣ್ಣ, ಜ್ಯೋತಿ ರಮೇಶ್ ಹಾಗೂ ಕೆ ಎಂ ರಾಮಾಂಜಿನಪ್ಪನವರು ಮತ್ತು ಹಾಲಿನ ಡೈರಿ ನಿರ್ದೇಶಕರು, ಊರಿನ ಮುಖಂಡರಾದ ಶ್ರೀನಿವಾಸ ಶೆಟ್ಟಿ ಹಾಗೂ ದೊಡ್ಡಬಚ್ಚಪ್ಪನವರು ಸೇರಿದಂತೆ ಊರಿನ ಸಮಸ್ತ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತೆಯ ದರ್ಶನ ಪಡೆದು ಪುನೀತರಾದರು.
ದೇವಾಲಯದ ಅರ್ಚಕರಾದ ಪಾಪೇಗೌಡರು ಮಾತನಾಡಿ, ಅನಾದಿಕಾಲದಿಂದಲೂ ದೇವಿಯರ ಪ್ರತಿಷ್ಟಾಪನೆ ಕಾರ್ಯ ನೆಡೆಯುತ್ತಿದ್ದು, ಈ ಭಾಗದ ಜನರು ಆರೋಗ್ಯವಾಗಿರಲೆಂದು ಹಾಗೂ ಮಾತೆಯ ಕೃಪೆಯಿಂದ ಈ ಭಾಗಗಳಲ್ಲಿ ಮಳೆ ಬೆಳೆಗಳು ಚೆನ್ನಾಗಿ ಆಗಲೆಂದು ಸಮಸ್ತ ನಾಡಿನ ಜನತೆಗೆ ಆಯುರಾರೋಗ್ಯ ನೀಡಲೆಂದು ದೇವರಲ್ಲಿ ಕೇಳಿಕೊಂಡರು.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…