ಗಣಪತಿ ಹಾಗೂ ತಾಯಿ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ

ತಾಲೂಕಿನ ಕೊನಘಟ್ಟ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಶ್ರೀ ದೊಡ್ಡಮ್ಮ ತಾಯಿ ಯುವಕರ ಬಳಗ, ಓಂಶಕ್ತಿ ಸೇವಾ ಟ್ರಸ್ಟ್ ಹಾಗೂ ಶ್ರೀ ವೀರಭದ್ರಸ್ವಾಮಿ ಭಜನಾ ಮಂಡಲಿ ಯವರ ನೇತೃತ್ವದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಗಣಪತಿ ಹಾಗೂ ತಾಯಿ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆ ಮಾಡಿ ವಿವಿಧ ಫಲ‌ ಪುಷ್ಪಗಳಿಂದ ಅಲಂಕರಿಸಿ ವಿಜೃಂಭಣೆಯಿಂದ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು.

ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕೊನಘಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಎಲ್ ಆರಾಧ್ಯ, ಭಾಗ್ಯಮ್ಮ ಸುಬ್ಬಣ್ಣ, ಜ್ಯೋತಿ ರಮೇಶ್ ಹಾಗೂ ಕೆ ಎಂ ರಾಮಾಂಜಿನಪ್ಪನವರು ಮತ್ತು ಹಾಲಿನ ಡೈರಿ ನಿರ್ದೇಶಕರು, ಊರಿನ ಮುಖಂಡರಾದ ಶ್ರೀನಿವಾಸ ಶೆಟ್ಟಿ ಹಾಗೂ ದೊಡ್ಡಬಚ್ಚಪ್ಪನವರು ಸೇರಿದಂತೆ ಊರಿನ ಸಮಸ್ತ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತೆಯ ದರ್ಶನ ಪಡೆದು ಪುನೀತರಾದರು.

ದೇವಾಲಯದ ಅರ್ಚಕರಾದ ಪಾಪೇಗೌಡರು ಮಾತನಾಡಿ, ಅನಾದಿಕಾಲದಿಂದಲೂ ದೇವಿಯರ ಪ್ರತಿಷ್ಟಾಪನೆ ಕಾರ್ಯ ನೆಡೆಯುತ್ತಿದ್ದು, ಈ ಭಾಗದ ಜನರು ಆರೋಗ್ಯವಾಗಿರಲೆಂದು ಹಾಗೂ ಮಾತೆಯ ಕೃಪೆಯಿಂದ ಈ ಭಾಗಗಳಲ್ಲಿ ಮಳೆ ಬೆಳೆಗಳು ಚೆನ್ನಾಗಿ ಆಗಲೆಂದು ಸಮಸ್ತ ನಾಡಿನ ಜನತೆಗೆ ಆಯುರಾರೋಗ್ಯ ನೀಡಲೆಂದು ದೇವರಲ್ಲಿ ಕೇಳಿಕೊಂಡರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

16 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago