Categories: ರಾಜ್ಯ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದಿದ್ದಾರೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.

ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

26 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago