ದೆಹಲಿಯಲ್ಲಿ 2024 ನೇ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ನಗರದ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಜಿ.ಹಿತೇಶ್ ಅವರು ಆಯ್ಕೆಯಾಗಿದ್ದಾರೆ.
ಜಿ.ಹಿತೇಶ್ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿ ಮಗನಾಗಿದ್ದಾರೆ.
ಘಟಂ ಮತ್ತು ತಬಲ ವಾದಕನಾಗಿ ನೂರಾರು ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಸಹ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಜಿ.ಹಿತೇಶ್ ಪಡೆದಿದ್ದಾರೆ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ ಪಡೆದುಕೊಂಡಿರುತ್ತಾರೆ.
ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ, ಪ್ರಸ್ತುತ ಬಿಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಯುವಕಲಾವಿದನಾಗಿ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಜಿ.ಹಿತೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದ ಕಾರ್ಯದರ್ಶಿ ಬಿ.ಚಂದ್ರಶೇಖರ್ ಅಭಿನಂದಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…