ಗಣಿತ ಹಾಗೂ ವಿಜ್ಞಾನ ಮೇಳದಿಂದ ಹಲವು ಪ್ರಯೋಗ, ಕ್ರಿಯಾತ್ಮಕ ಕೌಶಲ್ಯ ಬೆಳವಣಿಗೆ- ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೆಗೌಡ

ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ 1500ಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳು, ಪ್ರಯೋಗಗಳಲ್ಲಿ ತೊಡಗುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿನ ಬೆಳವಣಿಗೆಗಳ ಬಗ್ಗೆ ಕುತೂಹಲದಿಂದ ತಿಳಿದುಕೊಳ್ಳಲು ವಿಜ್ಞಾನ ಮತ್ತು ಗಣಿತ ಮೇಳವನ್ನ ಆಯೋಜನೆ ಮಾಡಲಾಗಿದೆ ಎಂದು ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೇಗೌಡ ಹೇಳಿದರು.

ತಾಲೂಕಿನ ಕೊನಘಟ್ಟ ಸಮೀಪವಿರುವ ನವೋದಯ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಿದ್ದ ಗಣಿತ ಹಾಗೂ ವಿಜ್ಞಾನ ಮೇಳವನ್ನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸ್ವಂತ ಅನುಭವಗಳಿಂದ ಕಲಿಯಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಜಾಗೃತಗೊಳಿಸುವುದು, ಪ್ರಾಯೋಗಿಕ ಕಲಿಕೆ, ಉನ್ನತ ಶಿಕ್ಷಣ ಹಾಗೂ ಸಾಧನೆಗಳತ್ತ ಪ್ರೇರಣೆ ನೀಡುವುದು ಮೇಳದ ಉದ್ದೇಶವಾಗಿತ್ತು. ನಮ್ಮ ಈ ಎಲ್ಲ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು.

ಶಾಲೆಯ ಆಡಳಿತ ಉಸ್ತುವಾರಿಯಾದ ಮುರಳಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ಮಾಡಿದರೆ, ಅವರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇವೆ. ಪ್ರತಿ ವರ್ಷವೂ ಈ ರೀತಿಯ ಮೇಳ ಆಯೋಜಿಸುವ ಉದ್ದೇಶವಿದೆ. ಮೇಳವು ವಿಜ್ಞಾನ ವಿಷಯದ ಪ್ರಾಯೋಗಿಕ ಕಲಿಕೆಯ ಜೊತೆಗೆ ಸಾಮಾನ್ಯ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ನೆರವಾಯಿತು. ರಸಪ್ರಶ್ನೆ ಸ್ಪರ್ಧೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಉತ್ತೇಜನ ನೀಡಲಾಯಿತು ಎಂದರು.

ಈ ವೇಳೆ  ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಭವ್ಯ, ಉಪನ್ಯಾಸಕರಾದ ಮಹೇಶ್ ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago