ಗಣಿತ ಹಾಗೂ ವಿಜ್ಞಾನ ಮೇಳದಿಂದ ಹಲವು ಪ್ರಯೋಗ, ಕ್ರಿಯಾತ್ಮಕ ಕೌಶಲ್ಯ ಬೆಳವಣಿಗೆ- ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೆಗೌಡ

ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ 1500ಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳು, ಪ್ರಯೋಗಗಳಲ್ಲಿ ತೊಡಗುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿನ ಬೆಳವಣಿಗೆಗಳ ಬಗ್ಗೆ ಕುತೂಹಲದಿಂದ ತಿಳಿದುಕೊಳ್ಳಲು ವಿಜ್ಞಾನ ಮತ್ತು ಗಣಿತ ಮೇಳವನ್ನ ಆಯೋಜನೆ ಮಾಡಲಾಗಿದೆ ಎಂದು ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೇಗೌಡ ಹೇಳಿದರು.

ತಾಲೂಕಿನ ಕೊನಘಟ್ಟ ಸಮೀಪವಿರುವ ನವೋದಯ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಿದ್ದ ಗಣಿತ ಹಾಗೂ ವಿಜ್ಞಾನ ಮೇಳವನ್ನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸ್ವಂತ ಅನುಭವಗಳಿಂದ ಕಲಿಯಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಜಾಗೃತಗೊಳಿಸುವುದು, ಪ್ರಾಯೋಗಿಕ ಕಲಿಕೆ, ಉನ್ನತ ಶಿಕ್ಷಣ ಹಾಗೂ ಸಾಧನೆಗಳತ್ತ ಪ್ರೇರಣೆ ನೀಡುವುದು ಮೇಳದ ಉದ್ದೇಶವಾಗಿತ್ತು. ನಮ್ಮ ಈ ಎಲ್ಲ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು.

ಶಾಲೆಯ ಆಡಳಿತ ಉಸ್ತುವಾರಿಯಾದ ಮುರಳಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ಮಾಡಿದರೆ, ಅವರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇವೆ. ಪ್ರತಿ ವರ್ಷವೂ ಈ ರೀತಿಯ ಮೇಳ ಆಯೋಜಿಸುವ ಉದ್ದೇಶವಿದೆ. ಮೇಳವು ವಿಜ್ಞಾನ ವಿಷಯದ ಪ್ರಾಯೋಗಿಕ ಕಲಿಕೆಯ ಜೊತೆಗೆ ಸಾಮಾನ್ಯ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ನೆರವಾಯಿತು. ರಸಪ್ರಶ್ನೆ ಸ್ಪರ್ಧೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಉತ್ತೇಜನ ನೀಡಲಾಯಿತು ಎಂದರು.

ಈ ವೇಳೆ  ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಭವ್ಯ, ಉಪನ್ಯಾಸಕರಾದ ಮಹೇಶ್ ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

57 minutes ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 hour ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

4 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

7 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

9 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

13 hours ago