ಗಣಿತ ಹಾಗೂ ವಿಜ್ಞಾನ ಮೇಳದಿಂದ ಹಲವು ಪ್ರಯೋಗ, ಕ್ರಿಯಾತ್ಮಕ ಕೌಶಲ್ಯ ಬೆಳವಣಿಗೆ- ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೆಗೌಡ

ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ 1500ಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳು, ಪ್ರಯೋಗಗಳಲ್ಲಿ ತೊಡಗುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿನ ಬೆಳವಣಿಗೆಗಳ ಬಗ್ಗೆ ಕುತೂಹಲದಿಂದ ತಿಳಿದುಕೊಳ್ಳಲು ವಿಜ್ಞಾನ ಮತ್ತು ಗಣಿತ ಮೇಳವನ್ನ ಆಯೋಜನೆ ಮಾಡಲಾಗಿದೆ ಎಂದು ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೇಗೌಡ ಹೇಳಿದರು.

ತಾಲೂಕಿನ ಕೊನಘಟ್ಟ ಸಮೀಪವಿರುವ ನವೋದಯ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಿದ್ದ ಗಣಿತ ಹಾಗೂ ವಿಜ್ಞಾನ ಮೇಳವನ್ನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸ್ವಂತ ಅನುಭವಗಳಿಂದ ಕಲಿಯಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಜಾಗೃತಗೊಳಿಸುವುದು, ಪ್ರಾಯೋಗಿಕ ಕಲಿಕೆ, ಉನ್ನತ ಶಿಕ್ಷಣ ಹಾಗೂ ಸಾಧನೆಗಳತ್ತ ಪ್ರೇರಣೆ ನೀಡುವುದು ಮೇಳದ ಉದ್ದೇಶವಾಗಿತ್ತು. ನಮ್ಮ ಈ ಎಲ್ಲ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು.

ಶಾಲೆಯ ಆಡಳಿತ ಉಸ್ತುವಾರಿಯಾದ ಮುರಳಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ಮಾಡಿದರೆ, ಅವರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇವೆ. ಪ್ರತಿ ವರ್ಷವೂ ಈ ರೀತಿಯ ಮೇಳ ಆಯೋಜಿಸುವ ಉದ್ದೇಶವಿದೆ. ಮೇಳವು ವಿಜ್ಞಾನ ವಿಷಯದ ಪ್ರಾಯೋಗಿಕ ಕಲಿಕೆಯ ಜೊತೆಗೆ ಸಾಮಾನ್ಯ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ನೆರವಾಯಿತು. ರಸಪ್ರಶ್ನೆ ಸ್ಪರ್ಧೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಉತ್ತೇಜನ ನೀಡಲಾಯಿತು ಎಂದರು.

ಈ ವೇಳೆ  ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಭವ್ಯ, ಉಪನ್ಯಾಸಕರಾದ ಮಹೇಶ್ ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

8 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

8 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

11 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago