ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯ ಭೀಕರ ಕೊಲೆ: ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿದ್ದೇ ಕೊಲೆಗೆ ಕಾರಣವಾಯ್ತಾ?‌ ಚುರುಕುಗೊಂಡ ತನಿಖೆ

ಬೆಂಗಳೂರು ನಗರ ಜಿಲ್ಲೆಯ ಗಣಿ ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಯನ್ನ  ಭೀಕರ ಕೊಲೆ ಮಾಡಿರುವ ಘಟನೆ ಬೆಂಗಳೂರು‌ ನಗರದ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಅಪಾರ್ಟ್ಮೆಂಟಿನಲ್ಲಿ ತಡರಾತ್ರಿ ನಡೆದಿದೆ.

ಕೆ.ಎಸ್.ಪ್ರತಿಮಾ(ಗಣಿ ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ) ಕೊಲೆಯಾದ ಸರ್ಕಾರಿ ಅಧಿಕಾರಿ. ಕಳೆದ ರಾತ್ರಿ ಡ್ರೈವರ್ 8ಗಂಟೆ ಸುಮಾರಿಗೆ ಪ್ರತಿಮಾ ಅವರನ್ನು ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಒಬ್ಬಂಟಿಯಾಗಿ ವಾಸವಿದ್ದ ಪ್ರತಿಮಾ ಅವರನ್ನು ಗಮನಿಸಿರುವ ದುಷ್ಕರ್ಮಿಗಳು ಏಕಾಏಕಿ ಮನೆಯ ಒಳಗೆ ನುಗ್ಗಿ ಕುತ್ತಿಗೆಗೆ ಹಗ್ಗ ಬಿಗಿದು ಉಸಿರುಗಟ್ಟಿಸಿ, ನಂತರ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕುತ್ತಿಗೆಯಲ್ಲಿ ಹಗ್ಗ ಬಿಗಿದಿರೊ ಗುರುತು ಪತ್ತೆಯಾಗಿದೆ. ಇಬ್ಬರು ದುಷ್ಕರ್ಮಿಗಳಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೊಡ್ಲೂರು ಸಮೀಪದ ಕಲ್ಕಟ್ಟೆಯ ಸುಬ್ಬಯ್ಯ ಗೌಡರ ಪುತ್ರಿ. ತುಡ್ಕಿಯ ಸತ್ಯನಾರಾಯಣ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ 13 ವರ್ಷದ ಓರ್ವ ಮಗ  ಇದ್ದಾನೆ. ಸದ್ಯ ಒಬ್ಬೊಂಟಿಯಾಗಿ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಅಪಾರ್ಟ್ ಮೆಂಟಿನಲ್ಲಿ ಬಾಡಿಗೆಗೆ ಒಬ್ಬರೇ ವಾಸವಾಗಿದ್ದರು.

ಅಕ್ರಮ ಕಲ್ಲು ಗಣಿಗಾರಿಕೆಯನ್ನ ನಿಲ್ಲಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸುಬ್ರಹ್ಮಣ್ಯಪುರ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಡ್ರೈವರ್, ಇಲಾಖಾ‌ ಸಿಬ್ಬಂದಿ, ಇಂಜಿನಿಯರ್, ಸ್ನೇಹಿತರು  ಸೇರಿದಂತೆ ಇತರರಿಂದ ಇಂಚಿಇಂಚೂ ಮಾಹಿತಿ, ಸಿಸಿಟಿವಿ ಫೂಟೇಜ್ ಪಡೆಯುತ್ತಿರುವ ಪೊಲೀಸರು.

ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿದ್ದಕ್ಕೆ ನನಗೆ ಜೀವ ಬೆದರಿಕೆ ಇದೆ ಎಂದು ನಿನ್ನೆ ರಾತ್ರಿ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಿಳಿಸಿದ್ದರು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

7 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

8 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 days ago