ಗಣೇಶ ಚತುರ್ಥಿ ದಿನದಂದು ‘ಜಿಯೋ ಏರ್ ಫೈಬರ್’ ಸೇವೆ ಆರಂಭ

ಜಿಯೋದ ಹೊಸ ಯೋಜನೆ ಏರ್ ಫೈಬರ್‌ ಸೇವೆಗಾಗಿ ಇನ್ನು ಕಾಯುವ ಅಗತ್ಯವಿಲ್ಲ. ಗಣೇಶ ಚತುರ್ಥಿಯಂದು ಅಂದರೆ ಸೆಪ್ಟೆಂಬರ್ 19 ರಂದು ಜಿಯೋ ಏರ್ ಫೈಬರ್ ಸೇವೆಯನ್ನು ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಿಸಿದ್ದಾರೆ.

ಜಿಯೋ ಏರ್ ಫೈಬರ್ 5ಜಿ ನೆಟ್‌ವರ್ಕ್ ಮತ್ತು ಅತ್ಯಾಧುನಿಕ ವೈರ್‌ಲೆಸ್ ತಂತ್ರಜ್ಞಾನವನ್ನು ಬಳಸಿಕೊಂಡು ಮನೆಗಳು ಮತ್ತು ಕಚೇರಿಗಳಿಗೆ ವೈರ್‌ಲೆಸ್ ಬ್ರಾಡ್‌ಬ್ಯಾಂಡ್ ಸೇವೆಯನ್ನು ಒದಗಿಸುತ್ತದೆ. ಜಿಯೋ ಏರ್ ಫೈಬರ್ ಆರಂಭದಿಂದಾಗಿ ದೂರಸಂಪರ್ಕ ಕ್ಷೇತ್ರದಲ್ಲಿ ಸಂಚಲನ ಉಂಟಾಗುವ ಸಾಧ್ಯತೆ ಇದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಮುಕೇಶ್ ಅಂಬಾನಿ, “ನಮ್ಮ ಆಪ್ಟಿಕಲ್ ಫೈಬರ್ ಸೇವೆಯಾದ ಜಿಯೋ ಫೈಬರ್‌ 10 ದಶಲಕ್ಷಕ್ಕೂ ಹೆಚ್ಚು ಸಂಪರ್ಕಗಳನ್ನು ಹೊಂದಿದೆ. ಇನ್ನೂ ಲಕ್ಷಾಂತರ ಮನೆಗಳಿಗೆ ಬೇಡಿಕೆ ಇದ್ದು, ಅಲ್ಲಿ ತಂತಿ ಸಂಪರ್ಕ ಕಲ್ಪಿಸುವುದು ಕಷ್ಟಕರವಾಗಿದೆ. ಈ ತೊಂದರೆಯನ್ನು ಜಿಯೋ ಏರ್ ಫೈಬರ್ ನಿವಾರಿಸುತ್ತದೆ. ಈ ಮೂಲಕ ನಾವು 20 ಕೋಟಿ ಮನೆ ಮತ್ತು ಕಚೇರಿಗಳನ್ನು ತಲುಪುವ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

ಜಿಯೋ ಏರ್ ಫೈಬರ್ ಆರಂಭದೊಂದಿಗೆ, ಜಿಯೋ ವಲಯಕ್ಕೆ ಪ್ರತಿದಿನ 1.5 ಲಕ್ಷ ಹೊಸ ಗ್ರಾಹಕರನ್ನು ಸೇರಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.
ಜಿಯೋದ ಆಪ್ಟಿಕಲ್ ಫೈಬರ್ ಸೌಲಭ್ಯವು ಭಾರತದಾದ್ಯಂತ 15 ಲಕ್ಷ ಕಿಮೀಗಳಷ್ಟು ಹರಡಿದೆ. ಆಪ್ಟಿಕಲ್ ಫೈಬರ್‌ನಲ್ಲಿ ಗ್ರಾಹಕರು ತಿಂಗಳಿಗೆ ಸರಾಸರಿ 280 ಜಿಬಿಗಿಂತ ಹೆಚ್ಚಿನ ಡೇಟಾವನ್ನು ಬಳಸುತ್ತಾರೆ. ಇದು ಜಿಯೋದ ತಲಾ ಮೊಬೈಲ್ ಇಂಟರ್ನೆಟ್ ಡೇಟಾ ಬಳಕೆಗಿಂತ 10 ಪಟ್ಟು ಹೆಚ್ಚು ಎಂದರು.

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಏರ್ ಫೈಬರ್ ಜೊತೆಗೆ ಜಿಯೋ ಟ್ರೂ 5ಜಿ ಡೆವಲಪರ್ ಪ್ಲಾಟ್‌ಫಾರ್ಮ್ ಮತ್ತು ಜಿಯೋ ಟ್ರೂ 5ಜಿ ಲ್ಯಾಬ್‌ಗಳನ್ನು ಪ್ರಾರಂಭಿಸುವುದಾಗಿ ಘೋಷಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ, “ಭಾರತೀಯ ಉದ್ಯಮಗಳು, ಸಣ್ಣ ಉದ್ಯಮಗಳು ಮತ್ತು ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳು ಡಿಜಿಟಲ್ ಪ್ರಪಂಚದೊಂದಿಗೆ ಸಂವಹನ ನಡೆಸುವ ವಿಧಾನವನ್ನು ಪರಿವರ್ತಿಸುವ ವೇದಿಕೆಯನ್ನು ನಾವು ನಿರ್ಮಿಸುತ್ತಿದ್ದೇವೆ. ಉದ್ಯಮಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಯೋ 5ಜಿ ನೆಟ್‌ವರ್ಕ್, ಎಡ್ಜ್ ಕಂಪ್ಯೂಟಿಂಗ್ ಮತ್ತು ಅಪ್ಲಿಕೇಶನ್‌ಗಳನ್ನು ಸಂಯೋಜಿಸುವ ಸಮಗ್ರ ವೇದಿಕೆಯನ್ನು ರಚಿಸಿದೆ. ಮತ್ತೊಂದೆಡೆ, ‘ಜಿಯೋ ಟ್ರೂ 5ಜಿ ಲ್ಯಾಬ್‌’ ನಲ್ಲಿರುವ ನಮ್ಮ ತಂತ್ರಜ್ಞಾನ ಪಾಲುದಾರರು ಉದ್ಯಮ-ನಿರ್ದಿಷ್ಟ ಪರಿಹಾರಗಳನ್ನು ಅಭಿವೃದ್ಧಿಪಡಿಸಬಹುದು, ಪರೀಕ್ಷಿಸಬಹುದು ಮತ್ತು ಸಹ-ನಿರ್ಮಾಣದಲ್ಲಿ ಜತೆಗೂಡಬಹುದು” ಎಂದು ಹೇಳಿದರು.

Ramesh Babu

Journalist

Recent Posts

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

26 minutes ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

3 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

5 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

7 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

10 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

14 hours ago