ಗಣೇಶ ಚತುರ್ಥಿ ದಿನದಂದು ‘ಜಿಯೋ ಏರ್ ಫೈಬರ್’ ಸೇವೆ ಆರಂಭ

ಜಿಯೋದ ಹೊಸ ಯೋಜನೆ ಏರ್ ಫೈಬರ್‌ ಸೇವೆಗಾಗಿ ಇನ್ನು ಕಾಯುವ ಅಗತ್ಯವಿಲ್ಲ. ಗಣೇಶ ಚತುರ್ಥಿಯಂದು ಅಂದರೆ ಸೆಪ್ಟೆಂಬರ್ 19 ರಂದು ಜಿಯೋ ಏರ್ ಫೈಬರ್ ಸೇವೆಯನ್ನು ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಿಸಿದ್ದಾರೆ.

ಜಿಯೋ ಏರ್ ಫೈಬರ್ 5ಜಿ ನೆಟ್‌ವರ್ಕ್ ಮತ್ತು ಅತ್ಯಾಧುನಿಕ ವೈರ್‌ಲೆಸ್ ತಂತ್ರಜ್ಞಾನವನ್ನು ಬಳಸಿಕೊಂಡು ಮನೆಗಳು ಮತ್ತು ಕಚೇರಿಗಳಿಗೆ ವೈರ್‌ಲೆಸ್ ಬ್ರಾಡ್‌ಬ್ಯಾಂಡ್ ಸೇವೆಯನ್ನು ಒದಗಿಸುತ್ತದೆ. ಜಿಯೋ ಏರ್ ಫೈಬರ್ ಆರಂಭದಿಂದಾಗಿ ದೂರಸಂಪರ್ಕ ಕ್ಷೇತ್ರದಲ್ಲಿ ಸಂಚಲನ ಉಂಟಾಗುವ ಸಾಧ್ಯತೆ ಇದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಮುಕೇಶ್ ಅಂಬಾನಿ, “ನಮ್ಮ ಆಪ್ಟಿಕಲ್ ಫೈಬರ್ ಸೇವೆಯಾದ ಜಿಯೋ ಫೈಬರ್‌ 10 ದಶಲಕ್ಷಕ್ಕೂ ಹೆಚ್ಚು ಸಂಪರ್ಕಗಳನ್ನು ಹೊಂದಿದೆ. ಇನ್ನೂ ಲಕ್ಷಾಂತರ ಮನೆಗಳಿಗೆ ಬೇಡಿಕೆ ಇದ್ದು, ಅಲ್ಲಿ ತಂತಿ ಸಂಪರ್ಕ ಕಲ್ಪಿಸುವುದು ಕಷ್ಟಕರವಾಗಿದೆ. ಈ ತೊಂದರೆಯನ್ನು ಜಿಯೋ ಏರ್ ಫೈಬರ್ ನಿವಾರಿಸುತ್ತದೆ. ಈ ಮೂಲಕ ನಾವು 20 ಕೋಟಿ ಮನೆ ಮತ್ತು ಕಚೇರಿಗಳನ್ನು ತಲುಪುವ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

ಜಿಯೋ ಏರ್ ಫೈಬರ್ ಆರಂಭದೊಂದಿಗೆ, ಜಿಯೋ ವಲಯಕ್ಕೆ ಪ್ರತಿದಿನ 1.5 ಲಕ್ಷ ಹೊಸ ಗ್ರಾಹಕರನ್ನು ಸೇರಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.
ಜಿಯೋದ ಆಪ್ಟಿಕಲ್ ಫೈಬರ್ ಸೌಲಭ್ಯವು ಭಾರತದಾದ್ಯಂತ 15 ಲಕ್ಷ ಕಿಮೀಗಳಷ್ಟು ಹರಡಿದೆ. ಆಪ್ಟಿಕಲ್ ಫೈಬರ್‌ನಲ್ಲಿ ಗ್ರಾಹಕರು ತಿಂಗಳಿಗೆ ಸರಾಸರಿ 280 ಜಿಬಿಗಿಂತ ಹೆಚ್ಚಿನ ಡೇಟಾವನ್ನು ಬಳಸುತ್ತಾರೆ. ಇದು ಜಿಯೋದ ತಲಾ ಮೊಬೈಲ್ ಇಂಟರ್ನೆಟ್ ಡೇಟಾ ಬಳಕೆಗಿಂತ 10 ಪಟ್ಟು ಹೆಚ್ಚು ಎಂದರು.

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಏರ್ ಫೈಬರ್ ಜೊತೆಗೆ ಜಿಯೋ ಟ್ರೂ 5ಜಿ ಡೆವಲಪರ್ ಪ್ಲಾಟ್‌ಫಾರ್ಮ್ ಮತ್ತು ಜಿಯೋ ಟ್ರೂ 5ಜಿ ಲ್ಯಾಬ್‌ಗಳನ್ನು ಪ್ರಾರಂಭಿಸುವುದಾಗಿ ಘೋಷಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ, “ಭಾರತೀಯ ಉದ್ಯಮಗಳು, ಸಣ್ಣ ಉದ್ಯಮಗಳು ಮತ್ತು ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳು ಡಿಜಿಟಲ್ ಪ್ರಪಂಚದೊಂದಿಗೆ ಸಂವಹನ ನಡೆಸುವ ವಿಧಾನವನ್ನು ಪರಿವರ್ತಿಸುವ ವೇದಿಕೆಯನ್ನು ನಾವು ನಿರ್ಮಿಸುತ್ತಿದ್ದೇವೆ. ಉದ್ಯಮಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಯೋ 5ಜಿ ನೆಟ್‌ವರ್ಕ್, ಎಡ್ಜ್ ಕಂಪ್ಯೂಟಿಂಗ್ ಮತ್ತು ಅಪ್ಲಿಕೇಶನ್‌ಗಳನ್ನು ಸಂಯೋಜಿಸುವ ಸಮಗ್ರ ವೇದಿಕೆಯನ್ನು ರಚಿಸಿದೆ. ಮತ್ತೊಂದೆಡೆ, ‘ಜಿಯೋ ಟ್ರೂ 5ಜಿ ಲ್ಯಾಬ್‌’ ನಲ್ಲಿರುವ ನಮ್ಮ ತಂತ್ರಜ್ಞಾನ ಪಾಲುದಾರರು ಉದ್ಯಮ-ನಿರ್ದಿಷ್ಟ ಪರಿಹಾರಗಳನ್ನು ಅಭಿವೃದ್ಧಿಪಡಿಸಬಹುದು, ಪರೀಕ್ಷಿಸಬಹುದು ಮತ್ತು ಸಹ-ನಿರ್ಮಾಣದಲ್ಲಿ ಜತೆಗೂಡಬಹುದು” ಎಂದು ಹೇಳಿದರು.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

4 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

7 hours ago

Instant Play Casino

Instant play casinos allow you to play casino games online without installing any software. These…

22 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago