ಗಣೇಶ ಮೂರ್ತಿ ಪ್ರತಿಷ್ಠಾಪನೆ ಬಳಿ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶ: ಚಿಕಿತ್ಸೆ ಫಲಿಸದೇ ಸಾವು

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿಂದು ನಡೆದಿದೆ.

ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿ ಮಗಳು ಚೇತನಾ (12) ಮೃತಪಟ್ಟ ಬಾಲಕಿ.

ಭಾನುಬಾರ ಬೆಳಿಗ್ಗೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಾಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷ ತಿಳಿಸಿದ್ದಾರೆ.

ಕೂಡಲೇ ಬಾಲಕಿ ಚೇತನಾಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿಜಾವ ಐದು ಗಂಟೆಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.

ಮೃತ ಚೇತನಾ ಕೊನಘಟ್ಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago