ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಓರ್ವ ಬಾಲಕ‌ ಸಾವು: 8ಕ್ಕೂ ಹೆಚ್ಚು ಮಂದಿಗೆ ಗಾಯ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು 8 ಮಂದಿಗೆ ಗಂಭೀರ ಗಾಯಳಾಗಿರುವ ಘಟನೆ ಇಂದು ಸಂಜೆ 5:45 ಗಂಟೆಗೆ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತನುಷ್ ರಾವ್(15), ಎಂಬ ವಿದ್ಯಾರ್ಥಿ ಮೃತಪಟ್ಟಿರುತ್ತಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…

ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ…

ಇಂದು ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಬ್ಯಾನರ್‌ ಮೆರವಣಿಗೆ ಮಾಡಲು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿವೆ ಎನ್ನಲಾಗಿದೆ.

ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದಲ್ಲಿಯೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಡಿವೈಎಸ್ಪಿ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಪೊಲೀಸ್‌ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago