ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು 8 ಮಂದಿಗೆ ಗಂಭೀರ ಗಾಯಳಾಗಿರುವ ಘಟನೆ ಇಂದು ಸಂಜೆ 5:45 ಗಂಟೆಗೆ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತನುಷ್ ರಾವ್(15), ಎಂಬ ವಿದ್ಯಾರ್ಥಿ ಮೃತಪಟ್ಟಿರುತ್ತಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…
ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ…
ಇಂದು ಫ್ರೆಂಡ್ಸ್ ವಿನಾಯಕ ಗ್ರೂಪ್ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರಾಕ್ಟರ್ನಲ್ಲಿ ಮೆರವಣಿಗೆ ಬರುವ ವೇಳೆ, ಬ್ಯಾನರ್ ಮೆರವಣಿಗೆ ಮಾಡಲು ಪವರ್ ಲಿಫ್ಟರ್ ವಾಹನವನ್ನು ಕರೆಸಲಾಗಿತ್ತು. ಪಟಾಕಿಗಳನ್ನು ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಡಲಾಗಿತ್ತು. ಚಿಕ್ಕ ಕ್ರೇನ್ ನ ಇಂಜಿನ್ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಫೋಟಗೊಂಡಿವೆ ಎನ್ನಲಾಗಿದೆ.
ಘಟನೆಯಲ್ಲಿ ಕ್ರೇನ್ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದಲ್ಲಿಯೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಡಿವೈಎಸ್ಪಿ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…