Categories: ಕೋಲಾರ

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ ಮೂಲಕ ಯುವಕರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಆಯಾ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರಿಗೆ ಗಣಪತಿ ಮೂರ್ತಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಣಾಮ ಬಹುತೇಕ ಕೆರೆ, ಕುಂಟೆಗಳು ಬತ್ತಿಹೋಗಿವೆ. ಕೆ.ಸಿ. ವ್ಯಾಲಿ ನೀರು ಹರಿಯುವ ಕೆಲವು ಕೆರೆಗಳು ಹಾಗೂ ಚೆಕ್‌ಡ್ಯಾಂಗಳಲ್ಲಿ ಮಾತ್ರ ನೀರು ಲಭ್ಯವಿದ್ದು, ರೈತರು ಕೃಷಿ ಹೊಂಡಗಳನ್ನು ಬೆಳೆಗಳಿಗೆ ನೀರು ಹರಿಸಲು ಬಳಸಿಕೊಳ್ಳುತ್ತಿದ್ದಾರೆ. ಇಂತಹ ಕೃಷಿ ಹೊಂಡಗಳಿಗೆ ಬೇಲಿ ಹಾಗೂ ಸುರಕ್ಷತಾ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ನೀರಿಗೆ ಇಳಿದು ಪ್ರಾಣ ಕಳೆದುಕೊಂಡಿರುವ ಘಟನೆಗಳು ಈಗಾಗಲೇ ನಡೆದಿವೆ ಎಂದು ಹೇಳಿದರು.

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕೃಷಿ ಹೊಂಡ, ಕೆರೆ, ಕುಂಟೆ ಹಾಗೂ ಚೆಕ್‌ಡ್ಯಾಂಗಳಿಗೆ ತೆರಳುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು, ಕೃಷಿ ಹೊಂಡಗಳಲ್ಲಿ ಗಣೇಶ ವಿಸರ್ಜನೆ ಮಾಡದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಮಾಲೀಕರಿಗೆ ಸೂಚಿಸಬೇಕು. ಮಕ್ಕಳನ್ನು ವಿಸರ್ಜನೆಗೆ ಕರೆದೊಯ್ಯದಂತೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

ಬರಗಾಲದ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಗೌರಿ-ಗಣೇಶ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜಾರಿಗೊಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಿದರು.

ಯುವ ರೈತ ಮುಖಂಡ ಯಾರಂಘಟ್ಟ ಗಿರೀಶ ಮಾತನಾಡಿ, ಹಬ್ಬದ ಸಂಭ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೆರವಣಿಗೆ ನಡೆಸಬೇಕು. ಅಹಿತಕರ ಘಟನೆಗಳನ್ನು ತಡೆಯಲು ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡದಂತೆ ಬಾರ್ ಮಾಲೀಕರಿಗೆ ತಿಳುವಳಿಕೆ ನೀಡಬೇಕು. ಪ್ರತಿ ಗ್ರಾಮದಲ್ಲೂ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬಯಲುಸೀಮೆಯ ಕೋಲಾರ ಜಿಲ್ಲೆಗೆ ವರದಾನವಾಗಿದ್ದ ಕೃಷಿ ಹೊಂಡಗಳು ಸೂಕ್ತ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿಯಾಗಿವೆ. ಕೃಷಿ ಹೊಂಡಗಳಿಗೆ ಬೇಲಿ ಅಳವಡಿಸುವಲ್ಲಿ ಕೃಷಿ ಇಲಾಖೆ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ಈಗಾಗಲೇ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಪರಿಸರಕ್ಕೆ ಹಾನಿಕಾರಕವಾಗಿರುವ ರಾಸಾಯನಿಕ ಮಿಶ್ರಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟವನ್ನು ಸ್ಥಗಿತಗೊಳಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿಯಮಗಳನ್ನು ಜಾರಿಗೊಳಿಸುವಂತೆ ಸೂಚಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕೃಷಿ ಹೊಂಡ, ಕೆರೆ, ಕುಂಟೆ ಹಾಗೂ ಚೆಕ್‌ಡ್ಯಾಂಗಳಲ್ಲಿ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಚಂದ್ರಪ್ಪ, ಕಮದಟ್ಟಿ ಚಲಪತಿ, ಮಂಜುನಾಥ್, ಪುತ್ತೇರಿ ರಾಜು, ನಾಗರಾಜ್, ತರ್ನಹಳ್ಳಿ ಆಂಜಿನಪ್ಪ, ಸುಪ್ರೀಂ ಚಲ ಮುನಿರಾಜು, ವಾನರಾಶಿ ವೀರಭದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 hour ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 hour ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

2 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

3 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

7 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

13 hours ago