ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್ ಆಗಿತ್ತು. ಕಿರಿಕ್ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ.
ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ.
ಗ್ರಾಮದಲ್ಲಿ ಹೆಸರು ಮಾಡಬೇಕು ಎಂದು ಆರೋಪಿ ಗೋವಿಂದ್ ಗ್ಯಾಂಗ್ ಕಟ್ಟಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ತನ್ನ ನಾಲ್ವರು ಸ್ನೇಹಿತರ ಜೊತೆ ಹೋಗಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ಸೇರಿದಂತೆ ನಾಲ್ವರು ಆರೋಪಿಗಳು ರಾತ್ರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನಲಾಗಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…