ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್ ಆಗಿತ್ತು. ಕಿರಿಕ್ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ.
ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ.
ಗ್ರಾಮದಲ್ಲಿ ಹೆಸರು ಮಾಡಬೇಕು ಎಂದು ಆರೋಪಿ ಗೋವಿಂದ್ ಗ್ಯಾಂಗ್ ಕಟ್ಟಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ತನ್ನ ನಾಲ್ವರು ಸ್ನೇಹಿತರ ಜೊತೆ ಹೋಗಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ಸೇರಿದಂತೆ ನಾಲ್ವರು ಆರೋಪಿಗಳು ರಾತ್ರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನಲಾಗಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…