ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್: ಹಳೇ ದ್ವೇಷಕ್ಕೆ ಸೆಕ್ಯೂರಿಟಿ ಗಾರ್ಡ್ ಬರ್ಬರ ಕೊಲೆ

ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್ ಆಗಿತ್ತು. ಕಿರಿಕ್ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ.

ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ‌. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ.

ಗ್ರಾಮದಲ್ಲಿ ಹೆಸರು ಮಾಡಬೇಕು ಎಂದು ಆರೋಪಿ ಗೋವಿಂದ್ ಗ್ಯಾಂಗ್ ಕಟ್ಟಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ತನ್ನ ನಾಲ್ವರು ಸ್ನೇಹಿತರ ಜೊತೆ ಹೋಗಿ ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆ‌ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ಸೇರಿದಂತೆ ನಾಲ್ವರು ಆರೋಪಿಗಳು‌ ರಾತ್ರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನಲಾಗಿದೆ.

ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

2 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

16 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

16 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

16 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago