ಗಣೇಶ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಕಿರಿಕ್ ಆಗಿತ್ತು. ಕಿರಿಕ್ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ.
ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ.
ಗ್ರಾಮದಲ್ಲಿ ಹೆಸರು ಮಾಡಬೇಕು ಎಂದು ಆರೋಪಿ ಗೋವಿಂದ್ ಗ್ಯಾಂಗ್ ಕಟ್ಟಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ತನ್ನ ನಾಲ್ವರು ಸ್ನೇಹಿತರ ಜೊತೆ ಹೋಗಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ಸೇರಿದಂತೆ ನಾಲ್ವರು ಆರೋಪಿಗಳು ರಾತ್ರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನಲಾಗಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…