“ಗಬ್ಬರ್ ಸಿಂಗ್ ತೆರಿಗೆ”(GST) ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ- ‌ಸಿಎಂ ಸಿದ್ದರಾಮಯ್ಯ

ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ನರೇಂದ್ರ ಮೋದಿ (Narendra Modi) ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ Rahul Gandhi ಮತ್ತು ವಿರೋಧ ಪಕ್ಷಗಳ ನಾಯಕರು ಜಿ.ಎಸ್.ಟಿ ಗೆ ಮಾಡಲೇಬೇಕಾಗಿದ್ದ ಸುಧಾರಣೆಗಾಗಿ ಒತ್ತಾಯಿಸಿದ್ದರು ಎಂದು ಹೇಳಿದರು.

“ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ. ತೆರಿಗೆ ಪಾವತಿ ವ್ಯವಸ್ಥೆಯ ಸಂಕೀರ್ಣತೆ ಮತ್ತು ವೆಚ್ಚದ ಹೊರೆ ಅವರ ಬದುಕನ್ನು ಸರಣಿ ಕಷ್ಟಗಳ ಸರಮಾಲೆಗೆ ಸಿಲುಕಿಸಲಿದೆ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೇಳುತ್ತಲೇ ಬಂದಿದ್ದೆವು. ಆದರೆ ನರೇಂದ್ರ ಮೋದಿಯವರು ನಮ್ಮ ಮಾತಿಗೆ ಕಿವಿಗೊಡದೆ ನಿರ್ಲಕ್ಷಿಸುತ್ತಲೇ ಬಂದಿದ್ದರು ಎಂದು ತಿಳಿಸಿದರು.

ವಾಸ್ತವದಲ್ಲಿ ಜಿ.ಎಸ್.ಟಿ ತೆರಿಗೆ ವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು ರಾಜ್ಯ ಸರ್ಕಾರಗಳು ಅಸಹಾಯಕತೆಯಿಂದ ನರಳಾಡುವುದರ ಹೊರತಾಗಿ ಬೇರೇನನ್ನೂ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ.
ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮೂರನೇ ಒಂದರಷ್ಟು ಮತದಾನದ ಹಕ್ಕು ಇದ್ದರೆ, ರಾಜ್ಯಗಳಿಗೆ ಮೂರನೇ ಎರಡರಷ್ಟಿದೆ. ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸುಧಾರಣೆಯನ್ನು ಮಾಡಬೇಕಾದರೆ ನಾಲ್ಕನೇ ಮೂರರಷ್ಟು ಬಹುಮತ ಅಗತ್ಯವಾಗಿದೆ. ಈ ಸ್ಥಿತಿಯಲ್ಲಿ ದೇಶದ ಎಲ್ಲ ರಾಜ್ಯಗಳು ಒಂದುಗೂಡಿ ತೆರಿಗೆ ಸುಧಾರಣೆಗೆ ಪ್ರಯತ್ನಿಸಿದರೂ ಅದನ್ನು ಕೇಂದ್ರ ಸರ್ಕಾರ ತಡೆಯಬಹುದಾಗಿದೆ. ಕಳೆದ ಎಂಟು ವರ್ಷಗಳಿಂದ ನರೇಂದ್ರ ಮೋದಿ ಸರ್ಕಾರ ಇದನ್ನೇ ಮಾಡುತ್ತಾ ಬಂದಿದೆ ಎಂದರು.

ಈಗ ಜಿ.ಎಸ್.ಟಿ ಕೌನ್ಸಿಲ್ ಕೈಗೊಂಡಿರುವ ಜಿ.ಎಸ್.ಟಿ ಸುಧಾರಣೆಯ ಪ್ರಯತ್ನಕ್ಕೆ‌ ಕೇಂದ್ರ ಸರ್ಕಾರವು ಬೆಂಬಲ ಕೊಟ್ಟಿರುವುದಕ್ಕೆ ಜನತೆಯ ಮೇಲಿನ ಅವರ ಕಾಳಜಿಗಿಂತಲೂ, ರಾಜ್ಯ ಸರ್ಕಾರಗಳು ಸತತವಾಗಿ ಹೇರುತ್ತಾ ಬಂದಿರುವ ಒತ್ತಡ ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಇದನ್ನು ಪ್ರಾರಂಭದಲ್ಲಿಯೇ ಮಾಡಿದ್ದರೆ ದೇಶದ ಜನತೆ ‘’ಗಬ್ಬರ್ ಸಿಂಗ್ ತೆರಿಗೆ” ವ್ಯವಸ್ಥೆಯಿಂದ ಪಡಬಾರದ ಕಷ್ಟಗಳನ್ನು ಪಡಬೇಕಾದ ಪರಿಸ್ಥಿತಿ ಇರುತ್ತಿರಲಿಲ್ಲ ಎಂದು ಹೇಳಿದರು.

ಈಗ ಜಿ.ಎಸ್.ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ ಮತ್ತು ಕೇಂದ್ರ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ)ಯ ಜವಾಬ್ದಾರಿಯಾಗಿದೆ. ಈ ತೆರಿಗೆ ಸುಧಾರಣೆಯನ್ನು ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ಲಾಭಾಂಶವನ್ನು ಹೆಚ್ಚುಮಾಡಲು ದುರುಪಯೋಗ ಮಾಡದಂತೆ ತಡೆಯುವ ಹೊಣೆ ಕೂಡಾ ಕೇಂದ್ರ ಸರ್ಕಾರದ್ದಾಗಿದೆ ಎಂದರು.

ಈಗಿನ ಲೆಕ್ಕಾಚಾರದ ಪ್ರಕಾರ ಈಗಿನ ಜಿ.ಎಸ್.ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ. ಹೀಗಿದ್ದರೂ ರಾಜ್ಯದ ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಜಿ.ಎಸ್.ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಈ ನಿರ್ಧಾರವನ್ನು ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗಲೂ ಸಂಗ್ರಹಿಸುತ್ತಿರುವ ಜಿ.ಎಸ್.ಟಿ ಪರಿಹಾರ ಸುಂಕದಲ್ಲಿ ನ್ಯಾಯಬದ್ಧ ಪಾಲನ್ನು ರಾಜ್ಯಕ್ಕೆ ನೀಡಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದರು.

ಜನತೆಯ ಖರೀದಿ ಸಾಮರ್ಥ್ಯದ ಹೆಚ್ಚಳ ಮತ್ತು ತೆರಿಗೆ ಪಾವತಿದಾರರ ಜಾಲದ ವಿಸ್ತರಣೆಯ ಮೂಲಕ ಆರ್ಥಿಕ ಅಭಿವೃದ್ದಿಯನ್ನು ಸಾಧಿಸಿ ಸರ್ವರಿಗೂ ಸಮೃದ್ದಿಯ ಪಾಲು ಸಿಗುವಂತೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

21 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago