ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ…ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ ‘TEAM MSS’ ಎಂಬ ಹೆಸರನ್ನು ಚಾಲ್ತಿಗೆ ತಂದಿದ್ದಾರೆ ಎನ್ನಲಾಗಿದೆ….

ಸುದೀರ್ಘ ಅವಧಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.. ಜೆಡಿಎಸ್ ನ ಕಟ್ಟಾಳಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ಮುನೇಗೌಡರಿಗೆ, ಕೆಲವೇ ಕೆಲವು ಮತಗಳ ಅಂತರದಿಂದ ಹಿನ್ನಡೆಯಾಗಿತ್ತು. ಆದರೂ, ಎದೆಗುಂದದೆ ತಾಲೂಕಿನಲ್ಲಿ ಹನಿ ಕುಡಿಯುವ ನೀರಿಗೂ ಅಭಾವ ಎದುರಾದ ಸಂದರ್ಭದಲ್ಲಿ ಸ್ವಂತ ಹಣದಿಂದ ತಾಲೂಕಿನ ವಿವಿಧೆ ಬೋರ್ ವೆಲ್ ಮುಖಾಂತರ ನೀರನ್ನು ಒದಗಿಸಿದರು. ನಗರದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಕೊಟ್ಟರು… ಅದೇರೀತಿ ತಾಲೂಕಿನ ಬಹುತೇಕ ದೇಗುಲಗಳಿಗೆ ಬಿ.ಮುನೇಗೌಡರು ಕಲ್ಲಿನ‌ ಸಹಾಯ ಮಾಡುವ ಮೂಲಕ ದೈವ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ‌..

2018 ಮತ್ತು 2023ರಲ್ಲಿ ‘ದಳಪತಿ’ಯಾಗಿ ಜನರ ಸೇವೆಗೆಂದು ಕಣಕ್ಕಿಳಿದಿದ್ದ ಬಿ.ಮುನೇಗೌಡರಿಗೆ ‘ಅದೃಷ್ಟ’ ಕೈ ಹಿಡಿಯಲಿಲ್ಲ. ಇದೀಗ ಬದಲಾದ ರಾಜಕೀಯ ‘ವಾತಾವರಣ’ದಲ್ಲಿ ಬಿ.ಮುನೇಗೌಡ ಹೊಸ ಹೆಜ್ಜೆ ಇಟ್ಟಂತೆ ಮೇಲ್ನೋಟಕ್ಕೆ ಕಾಣುತ್ತಿದೆ….

ಯುಗಾದಿಯ ಹೊಸ ಚಿಗುರಿನ ಸಮಯದಲ್ಲಿ ಮುನೇಗೌಡರ ಹೊಸ ಕನಸು ಕೂಡ ಚಿಗುರಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ “TEAM MSS” ಹೆಸರಿನಲ್ಲಿ ಹೊಸ ಪೋಸ್ಟ್ ಗಳು ರಾರಾಜಿಸುತ್ತಿವೆ.. ಈ ಪೋಸ್ಟರ್ ಗಳಲ್ಲಿ ಮುನೇಗೌಡರು ತಾಲೂಕಿಗೆ ಮಾಡಿದಂತಹ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ನಮೂದಿಸಲಾಗಿದೆ‌. ಈ ಮೂಲಕ ತಮ್ಮ ಅಭಿಮಾನಿಗಳು, ತಾಲೂಕಿನ ಜನತೆಗೆ ಯುಗಾದಿ ಸಂದರ್ಭದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ..

ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಬಾಕಿ ಇರುವಂತೆಯೇ ಮುನೇಗೌಡರು ಕ್ರೀಯಾಶೀಲರಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ…

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago