ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ…ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ ‘TEAM MSS’ ಎಂಬ ಹೆಸರನ್ನು ಚಾಲ್ತಿಗೆ ತಂದಿದ್ದಾರೆ ಎನ್ನಲಾಗಿದೆ….

ಸುದೀರ್ಘ ಅವಧಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.. ಜೆಡಿಎಸ್ ನ ಕಟ್ಟಾಳಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ಮುನೇಗೌಡರಿಗೆ, ಕೆಲವೇ ಕೆಲವು ಮತಗಳ ಅಂತರದಿಂದ ಹಿನ್ನಡೆಯಾಗಿತ್ತು. ಆದರೂ, ಎದೆಗುಂದದೆ ತಾಲೂಕಿನಲ್ಲಿ ಹನಿ ಕುಡಿಯುವ ನೀರಿಗೂ ಅಭಾವ ಎದುರಾದ ಸಂದರ್ಭದಲ್ಲಿ ಸ್ವಂತ ಹಣದಿಂದ ತಾಲೂಕಿನ ವಿವಿಧೆ ಬೋರ್ ವೆಲ್ ಮುಖಾಂತರ ನೀರನ್ನು ಒದಗಿಸಿದರು. ನಗರದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಕೊಟ್ಟರು… ಅದೇರೀತಿ ತಾಲೂಕಿನ ಬಹುತೇಕ ದೇಗುಲಗಳಿಗೆ ಬಿ.ಮುನೇಗೌಡರು ಕಲ್ಲಿನ‌ ಸಹಾಯ ಮಾಡುವ ಮೂಲಕ ದೈವ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ‌..

2018 ಮತ್ತು 2023ರಲ್ಲಿ ‘ದಳಪತಿ’ಯಾಗಿ ಜನರ ಸೇವೆಗೆಂದು ಕಣಕ್ಕಿಳಿದಿದ್ದ ಬಿ.ಮುನೇಗೌಡರಿಗೆ ‘ಅದೃಷ್ಟ’ ಕೈ ಹಿಡಿಯಲಿಲ್ಲ. ಇದೀಗ ಬದಲಾದ ರಾಜಕೀಯ ‘ವಾತಾವರಣ’ದಲ್ಲಿ ಬಿ.ಮುನೇಗೌಡ ಹೊಸ ಹೆಜ್ಜೆ ಇಟ್ಟಂತೆ ಮೇಲ್ನೋಟಕ್ಕೆ ಕಾಣುತ್ತಿದೆ….

ಯುಗಾದಿಯ ಹೊಸ ಚಿಗುರಿನ ಸಮಯದಲ್ಲಿ ಮುನೇಗೌಡರ ಹೊಸ ಕನಸು ಕೂಡ ಚಿಗುರಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ “TEAM MSS” ಹೆಸರಿನಲ್ಲಿ ಹೊಸ ಪೋಸ್ಟ್ ಗಳು ರಾರಾಜಿಸುತ್ತಿವೆ.. ಈ ಪೋಸ್ಟರ್ ಗಳಲ್ಲಿ ಮುನೇಗೌಡರು ತಾಲೂಕಿಗೆ ಮಾಡಿದಂತಹ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ನಮೂದಿಸಲಾಗಿದೆ‌. ಈ ಮೂಲಕ ತಮ್ಮ ಅಭಿಮಾನಿಗಳು, ತಾಲೂಕಿನ ಜನತೆಗೆ ಯುಗಾದಿ ಸಂದರ್ಭದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ..

ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಬಾಕಿ ಇರುವಂತೆಯೇ ಮುನೇಗೌಡರು ಕ್ರೀಯಾಶೀಲರಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ…

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

7 minutes ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 hour ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

13 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

13 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

13 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

13 hours ago