ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ…ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ ‘TEAM MSS’ ಎಂಬ ಹೆಸರನ್ನು ಚಾಲ್ತಿಗೆ ತಂದಿದ್ದಾರೆ ಎನ್ನಲಾಗಿದೆ….

ಸುದೀರ್ಘ ಅವಧಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.. ಜೆಡಿಎಸ್ ನ ಕಟ್ಟಾಳಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ಮುನೇಗೌಡರಿಗೆ, ಕೆಲವೇ ಕೆಲವು ಮತಗಳ ಅಂತರದಿಂದ ಹಿನ್ನಡೆಯಾಗಿತ್ತು. ಆದರೂ, ಎದೆಗುಂದದೆ ತಾಲೂಕಿನಲ್ಲಿ ಹನಿ ಕುಡಿಯುವ ನೀರಿಗೂ ಅಭಾವ ಎದುರಾದ ಸಂದರ್ಭದಲ್ಲಿ ಸ್ವಂತ ಹಣದಿಂದ ತಾಲೂಕಿನ ವಿವಿಧೆ ಬೋರ್ ವೆಲ್ ಮುಖಾಂತರ ನೀರನ್ನು ಒದಗಿಸಿದರು. ನಗರದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಕೊಟ್ಟರು… ಅದೇರೀತಿ ತಾಲೂಕಿನ ಬಹುತೇಕ ದೇಗುಲಗಳಿಗೆ ಬಿ.ಮುನೇಗೌಡರು ಕಲ್ಲಿನ‌ ಸಹಾಯ ಮಾಡುವ ಮೂಲಕ ದೈವ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ‌..

2018 ಮತ್ತು 2023ರಲ್ಲಿ ‘ದಳಪತಿ’ಯಾಗಿ ಜನರ ಸೇವೆಗೆಂದು ಕಣಕ್ಕಿಳಿದಿದ್ದ ಬಿ.ಮುನೇಗೌಡರಿಗೆ ‘ಅದೃಷ್ಟ’ ಕೈ ಹಿಡಿಯಲಿಲ್ಲ. ಇದೀಗ ಬದಲಾದ ರಾಜಕೀಯ ‘ವಾತಾವರಣ’ದಲ್ಲಿ ಬಿ.ಮುನೇಗೌಡ ಹೊಸ ಹೆಜ್ಜೆ ಇಟ್ಟಂತೆ ಮೇಲ್ನೋಟಕ್ಕೆ ಕಾಣುತ್ತಿದೆ….

ಯುಗಾದಿಯ ಹೊಸ ಚಿಗುರಿನ ಸಮಯದಲ್ಲಿ ಮುನೇಗೌಡರ ಹೊಸ ಕನಸು ಕೂಡ ಚಿಗುರಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ “TEAM MSS” ಹೆಸರಿನಲ್ಲಿ ಹೊಸ ಪೋಸ್ಟ್ ಗಳು ರಾರಾಜಿಸುತ್ತಿವೆ.. ಈ ಪೋಸ್ಟರ್ ಗಳಲ್ಲಿ ಮುನೇಗೌಡರು ತಾಲೂಕಿಗೆ ಮಾಡಿದಂತಹ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ನಮೂದಿಸಲಾಗಿದೆ‌. ಈ ಮೂಲಕ ತಮ್ಮ ಅಭಿಮಾನಿಗಳು, ತಾಲೂಕಿನ ಜನತೆಗೆ ಯುಗಾದಿ ಸಂದರ್ಭದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ..

ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಬಾಕಿ ಇರುವಂತೆಯೇ ಮುನೇಗೌಡರು ಕ್ರೀಯಾಶೀಲರಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ…

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

3 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

11 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

14 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago