ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ…ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ ‘TEAM MSS’ ಎಂಬ ಹೆಸರನ್ನು ಚಾಲ್ತಿಗೆ ತಂದಿದ್ದಾರೆ ಎನ್ನಲಾಗಿದೆ….
ಸುದೀರ್ಘ ಅವಧಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.. ಜೆಡಿಎಸ್ ನ ಕಟ್ಟಾಳಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ಮುನೇಗೌಡರಿಗೆ, ಕೆಲವೇ ಕೆಲವು ಮತಗಳ ಅಂತರದಿಂದ ಹಿನ್ನಡೆಯಾಗಿತ್ತು. ಆದರೂ, ಎದೆಗುಂದದೆ ತಾಲೂಕಿನಲ್ಲಿ ಹನಿ ಕುಡಿಯುವ ನೀರಿಗೂ ಅಭಾವ ಎದುರಾದ ಸಂದರ್ಭದಲ್ಲಿ ಸ್ವಂತ ಹಣದಿಂದ ತಾಲೂಕಿನ ವಿವಿಧೆ ಬೋರ್ ವೆಲ್ ಮುಖಾಂತರ ನೀರನ್ನು ಒದಗಿಸಿದರು. ನಗರದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಕೊಟ್ಟರು… ಅದೇರೀತಿ ತಾಲೂಕಿನ ಬಹುತೇಕ ದೇಗುಲಗಳಿಗೆ ಬಿ.ಮುನೇಗೌಡರು ಕಲ್ಲಿನ ಸಹಾಯ ಮಾಡುವ ಮೂಲಕ ದೈವ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ..
2018 ಮತ್ತು 2023ರಲ್ಲಿ ‘ದಳಪತಿ’ಯಾಗಿ ಜನರ ಸೇವೆಗೆಂದು ಕಣಕ್ಕಿಳಿದಿದ್ದ ಬಿ.ಮುನೇಗೌಡರಿಗೆ ‘ಅದೃಷ್ಟ’ ಕೈ ಹಿಡಿಯಲಿಲ್ಲ. ಇದೀಗ ಬದಲಾದ ರಾಜಕೀಯ ‘ವಾತಾವರಣ’ದಲ್ಲಿ ಬಿ.ಮುನೇಗೌಡ ಹೊಸ ಹೆಜ್ಜೆ ಇಟ್ಟಂತೆ ಮೇಲ್ನೋಟಕ್ಕೆ ಕಾಣುತ್ತಿದೆ….
ಯುಗಾದಿಯ ಹೊಸ ಚಿಗುರಿನ ಸಮಯದಲ್ಲಿ ಮುನೇಗೌಡರ ಹೊಸ ಕನಸು ಕೂಡ ಚಿಗುರಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ “TEAM MSS” ಹೆಸರಿನಲ್ಲಿ ಹೊಸ ಪೋಸ್ಟ್ ಗಳು ರಾರಾಜಿಸುತ್ತಿವೆ.. ಈ ಪೋಸ್ಟರ್ ಗಳಲ್ಲಿ ಮುನೇಗೌಡರು ತಾಲೂಕಿಗೆ ಮಾಡಿದಂತಹ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ನಮೂದಿಸಲಾಗಿದೆ. ಈ ಮೂಲಕ ತಮ್ಮ ಅಭಿಮಾನಿಗಳು, ತಾಲೂಕಿನ ಜನತೆಗೆ ಯುಗಾದಿ ಸಂದರ್ಭದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ..
ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಬಾಕಿ ಇರುವಂತೆಯೇ ಮುನೇಗೌಡರು ಕ್ರೀಯಾಶೀಲರಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…