ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ…ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ ‘TEAM MSS’ ಎಂಬ ಹೆಸರನ್ನು ಚಾಲ್ತಿಗೆ ತಂದಿದ್ದಾರೆ ಎನ್ನಲಾಗಿದೆ….
ಸುದೀರ್ಘ ಅವಧಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.. ಜೆಡಿಎಸ್ ನ ಕಟ್ಟಾಳಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ಮುನೇಗೌಡರಿಗೆ, ಕೆಲವೇ ಕೆಲವು ಮತಗಳ ಅಂತರದಿಂದ ಹಿನ್ನಡೆಯಾಗಿತ್ತು. ಆದರೂ, ಎದೆಗುಂದದೆ ತಾಲೂಕಿನಲ್ಲಿ ಹನಿ ಕುಡಿಯುವ ನೀರಿಗೂ ಅಭಾವ ಎದುರಾದ ಸಂದರ್ಭದಲ್ಲಿ ಸ್ವಂತ ಹಣದಿಂದ ತಾಲೂಕಿನ ವಿವಿಧೆ ಬೋರ್ ವೆಲ್ ಮುಖಾಂತರ ನೀರನ್ನು ಒದಗಿಸಿದರು. ನಗರದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಕೊಟ್ಟರು… ಅದೇರೀತಿ ತಾಲೂಕಿನ ಬಹುತೇಕ ದೇಗುಲಗಳಿಗೆ ಬಿ.ಮುನೇಗೌಡರು ಕಲ್ಲಿನ ಸಹಾಯ ಮಾಡುವ ಮೂಲಕ ದೈವ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ..
2018 ಮತ್ತು 2023ರಲ್ಲಿ ‘ದಳಪತಿ’ಯಾಗಿ ಜನರ ಸೇವೆಗೆಂದು ಕಣಕ್ಕಿಳಿದಿದ್ದ ಬಿ.ಮುನೇಗೌಡರಿಗೆ ‘ಅದೃಷ್ಟ’ ಕೈ ಹಿಡಿಯಲಿಲ್ಲ. ಇದೀಗ ಬದಲಾದ ರಾಜಕೀಯ ‘ವಾತಾವರಣ’ದಲ್ಲಿ ಬಿ.ಮುನೇಗೌಡ ಹೊಸ ಹೆಜ್ಜೆ ಇಟ್ಟಂತೆ ಮೇಲ್ನೋಟಕ್ಕೆ ಕಾಣುತ್ತಿದೆ….
ಯುಗಾದಿಯ ಹೊಸ ಚಿಗುರಿನ ಸಮಯದಲ್ಲಿ ಮುನೇಗೌಡರ ಹೊಸ ಕನಸು ಕೂಡ ಚಿಗುರಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ “TEAM MSS” ಹೆಸರಿನಲ್ಲಿ ಹೊಸ ಪೋಸ್ಟ್ ಗಳು ರಾರಾಜಿಸುತ್ತಿವೆ.. ಈ ಪೋಸ್ಟರ್ ಗಳಲ್ಲಿ ಮುನೇಗೌಡರು ತಾಲೂಕಿಗೆ ಮಾಡಿದಂತಹ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ನಮೂದಿಸಲಾಗಿದೆ. ಈ ಮೂಲಕ ತಮ್ಮ ಅಭಿಮಾನಿಗಳು, ತಾಲೂಕಿನ ಜನತೆಗೆ ಯುಗಾದಿ ಸಂದರ್ಭದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ..
ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಬಾಕಿ ಇರುವಂತೆಯೇ ಮುನೇಗೌಡರು ಕ್ರೀಯಾಶೀಲರಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…