ಇಂದು ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI)ಮೈಸೂರು ವಿಶ್ವ ವಿದ್ಯಾನಿಲಯ ಘಟಕದ ವತಿಯಿಂದ ಸ್ವಚ್ಛಗಂಗೋತ್ರಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಗಾಂಧಿ ಭವನದಲ್ಲಿ ಗಾಂಧಿ ಪ್ರತಿಮೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಜಿಲ್ಲಾ ಕಾರ್ಯದರ್ಶಿಯಾದ ಪ್ರಜ್ವಲ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಮೈಸೂರು ವಿವಿ ಘಟಕದ ಕಾರ್ಯದರ್ಶಿಗಳಾದ ಸಂತೋಷ್ ಜಾದವ್ ಅವರು ಅಧ್ಯಕ್ಷೀಯ ನುಡ್ಡಿಗಳನ್ನಾಡಿ ಸ್ವಚ್ಛಗಂಗೋತ್ರಿ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಸದಸ್ಯರು ಕೂಡಿ ಆವರಣದಲ್ಲಿರುವ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರು ತಿಂದು ಬಿಸಾಡಿದ ಪ್ಲಾಸ್ಟಿಕ್ ಕವರ್, ತಟ್ಟೆ ಚಮಚದಿಂದ ಮಾನಸ ಗಂಗೋತ್ರಿ ಆವರಣದ ತುಂಬಾ ತುಂಬಿದ್ದು, ಎಲ್ಲಾ ಪ್ಲಾಸ್ಟಿಕ್ ಮತ್ತು ತಿಂದು ಬಿಸಾಡಿದ್ದ ತ್ಯಾಜ್ಯಗಳನ್ನು ಶೇಕರಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಹಾಯ ಬಳಸಿ ಎಲ್ಲ ತ್ಯಾಜ್ಯದ ಬ್ಯಾಗ್ ಗಳನ್ನು ಪಾಲಿಕೆಯ ವಾಹನಕ್ಕೆ ತುಂಬಿಸಿ ಕಳುಹಿಸಲಾಯಿತು.
ನಂತರ ಮೈಸೂರು ವಿವಿ ಘಟಕದ ಅಧ್ಯಕ್ಷರಾದ ಚಿರಾಗ್ ಎಸ್. ಕೆ ಅವರು ವಂದನಾರ್ಪಣೆ ಮಾಡಿ ಸಹಾಯ ಮಾಡಿದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ನಗರದ ಸಮಿತಿಯ ಅಧ್ಯಕ್ಷರಾದ ಅಭಿ.ಡಿ, ಮೈಸೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಪ್ರಜ್ವಲ್ ಟಿ, ಮೈಸೂರು ವಿಶ್ವವಿದ್ಯಾನಿಲಯ ಘಟಕದ ಚಿರಾಗ್ ಎಸ್.ಕೆ, ಸಂತೋಷ್ ಜಾಧವ್, ಪವನ್ ಕುಮಾರ್, ಭರತ್ ಹಾಗೂ ಶಿವಕುಮಾರ್ ಅವರು ಭಾಗವಹಿಸಿದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…