Categories: ಮೈಸೂರು

ಗಾಂಧಿ ಜಯಂತಿ: SFI ವತಿಯಿಂದ ಸ್ವಚ್ಛಗಂಗೋತ್ರಿ ಅಭಿಯಾನ

ಇಂದು ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI)ಮೈಸೂರು ವಿಶ್ವ ವಿದ್ಯಾನಿಲಯ ಘಟಕದ ವತಿಯಿಂದ  ಸ್ವಚ್ಛಗಂಗೋತ್ರಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಗಾಂಧಿ ಭವನದಲ್ಲಿ ಗಾಂಧಿ ಪ್ರತಿಮೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಜಿಲ್ಲಾ ಕಾರ್ಯದರ್ಶಿಯಾದ ಪ್ರಜ್ವಲ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ  ಮೈಸೂರು ವಿವಿ ಘಟಕದ ಕಾರ್ಯದರ್ಶಿಗಳಾದ ಸಂತೋಷ್ ಜಾದವ್ ಅವರು ಅಧ್ಯಕ್ಷೀಯ ನುಡ್ಡಿಗಳನ್ನಾಡಿ ಸ್ವಚ್ಛಗಂಗೋತ್ರಿ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಸದಸ್ಯರು ಕೂಡಿ ಆವರಣದಲ್ಲಿರುವ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರು ತಿಂದು ಬಿಸಾಡಿದ ಪ್ಲಾಸ್ಟಿಕ್ ಕವರ್, ತಟ್ಟೆ ಚಮಚದಿಂದ ಮಾನಸ ಗಂಗೋತ್ರಿ ಆವರಣದ ತುಂಬಾ ತುಂಬಿದ್ದು, ಎಲ್ಲಾ ಪ್ಲಾಸ್ಟಿಕ್ ಮತ್ತು ತಿಂದು ಬಿಸಾಡಿದ್ದ ತ್ಯಾಜ್ಯಗಳನ್ನು ಶೇಕರಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಹಾಯ ಬಳಸಿ ಎಲ್ಲ ತ್ಯಾಜ್ಯದ ಬ್ಯಾಗ್ ಗಳನ್ನು ಪಾಲಿಕೆಯ ವಾಹನಕ್ಕೆ ತುಂಬಿಸಿ ಕಳುಹಿಸಲಾಯಿತು.

ನಂತರ ಮೈಸೂರು ವಿವಿ ಘಟಕದ ಅಧ್ಯಕ್ಷರಾದ ಚಿರಾಗ್ ಎಸ್. ಕೆ ಅವರು ವಂದನಾರ್ಪಣೆ ಮಾಡಿ ಸಹಾಯ ಮಾಡಿದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ನಗರದ ಸಮಿತಿಯ ಅಧ್ಯಕ್ಷರಾದ ಅಭಿ.ಡಿ, ಮೈಸೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಪ್ರಜ್ವಲ್ ಟಿ, ಮೈಸೂರು ವಿಶ್ವವಿದ್ಯಾನಿಲಯ ಘಟಕದ ಚಿರಾಗ್ ಎಸ್.ಕೆ, ಸಂತೋಷ್ ಜಾಧವ್, ಪವನ್ ಕುಮಾರ್, ಭರತ್ ಹಾಗೂ ಶಿವಕುಮಾರ್ ಅವರು ಭಾಗವಹಿಸಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

9 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago