ಇಂದು ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI)ಮೈಸೂರು ವಿಶ್ವ ವಿದ್ಯಾನಿಲಯ ಘಟಕದ ವತಿಯಿಂದ ಸ್ವಚ್ಛಗಂಗೋತ್ರಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಗಾಂಧಿ ಭವನದಲ್ಲಿ ಗಾಂಧಿ ಪ್ರತಿಮೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಜಿಲ್ಲಾ ಕಾರ್ಯದರ್ಶಿಯಾದ ಪ್ರಜ್ವಲ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಮೈಸೂರು ವಿವಿ ಘಟಕದ ಕಾರ್ಯದರ್ಶಿಗಳಾದ ಸಂತೋಷ್ ಜಾದವ್ ಅವರು ಅಧ್ಯಕ್ಷೀಯ ನುಡ್ಡಿಗಳನ್ನಾಡಿ ಸ್ವಚ್ಛಗಂಗೋತ್ರಿ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಸದಸ್ಯರು ಕೂಡಿ ಆವರಣದಲ್ಲಿರುವ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರು ತಿಂದು ಬಿಸಾಡಿದ ಪ್ಲಾಸ್ಟಿಕ್ ಕವರ್, ತಟ್ಟೆ ಚಮಚದಿಂದ ಮಾನಸ ಗಂಗೋತ್ರಿ ಆವರಣದ ತುಂಬಾ ತುಂಬಿದ್ದು, ಎಲ್ಲಾ ಪ್ಲಾಸ್ಟಿಕ್ ಮತ್ತು ತಿಂದು ಬಿಸಾಡಿದ್ದ ತ್ಯಾಜ್ಯಗಳನ್ನು ಶೇಕರಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಹಾಯ ಬಳಸಿ ಎಲ್ಲ ತ್ಯಾಜ್ಯದ ಬ್ಯಾಗ್ ಗಳನ್ನು ಪಾಲಿಕೆಯ ವಾಹನಕ್ಕೆ ತುಂಬಿಸಿ ಕಳುಹಿಸಲಾಯಿತು.
ನಂತರ ಮೈಸೂರು ವಿವಿ ಘಟಕದ ಅಧ್ಯಕ್ಷರಾದ ಚಿರಾಗ್ ಎಸ್. ಕೆ ಅವರು ವಂದನಾರ್ಪಣೆ ಮಾಡಿ ಸಹಾಯ ಮಾಡಿದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ನಗರದ ಸಮಿತಿಯ ಅಧ್ಯಕ್ಷರಾದ ಅಭಿ.ಡಿ, ಮೈಸೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಪ್ರಜ್ವಲ್ ಟಿ, ಮೈಸೂರು ವಿಶ್ವವಿದ್ಯಾನಿಲಯ ಘಟಕದ ಚಿರಾಗ್ ಎಸ್.ಕೆ, ಸಂತೋಷ್ ಜಾಧವ್, ಪವನ್ ಕುಮಾರ್, ಭರತ್ ಹಾಗೂ ಶಿವಕುಮಾರ್ ಅವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…