Categories: ಮೈಸೂರು

ಗಾಂಧಿ ಜಯಂತಿ: SFI ವತಿಯಿಂದ ಸ್ವಚ್ಛಗಂಗೋತ್ರಿ ಅಭಿಯಾನ

ಇಂದು ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI)ಮೈಸೂರು ವಿಶ್ವ ವಿದ್ಯಾನಿಲಯ ಘಟಕದ ವತಿಯಿಂದ  ಸ್ವಚ್ಛಗಂಗೋತ್ರಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಗಾಂಧಿ ಭವನದಲ್ಲಿ ಗಾಂಧಿ ಪ್ರತಿಮೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಜಿಲ್ಲಾ ಕಾರ್ಯದರ್ಶಿಯಾದ ಪ್ರಜ್ವಲ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ  ಮೈಸೂರು ವಿವಿ ಘಟಕದ ಕಾರ್ಯದರ್ಶಿಗಳಾದ ಸಂತೋಷ್ ಜಾದವ್ ಅವರು ಅಧ್ಯಕ್ಷೀಯ ನುಡ್ಡಿಗಳನ್ನಾಡಿ ಸ್ವಚ್ಛಗಂಗೋತ್ರಿ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ SFI ನ ಸದಸ್ಯರು ಕೂಡಿ ಆವರಣದಲ್ಲಿರುವ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರು ತಿಂದು ಬಿಸಾಡಿದ ಪ್ಲಾಸ್ಟಿಕ್ ಕವರ್, ತಟ್ಟೆ ಚಮಚದಿಂದ ಮಾನಸ ಗಂಗೋತ್ರಿ ಆವರಣದ ತುಂಬಾ ತುಂಬಿದ್ದು, ಎಲ್ಲಾ ಪ್ಲಾಸ್ಟಿಕ್ ಮತ್ತು ತಿಂದು ಬಿಸಾಡಿದ್ದ ತ್ಯಾಜ್ಯಗಳನ್ನು ಶೇಕರಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಹಾಯ ಬಳಸಿ ಎಲ್ಲ ತ್ಯಾಜ್ಯದ ಬ್ಯಾಗ್ ಗಳನ್ನು ಪಾಲಿಕೆಯ ವಾಹನಕ್ಕೆ ತುಂಬಿಸಿ ಕಳುಹಿಸಲಾಯಿತು.

ನಂತರ ಮೈಸೂರು ವಿವಿ ಘಟಕದ ಅಧ್ಯಕ್ಷರಾದ ಚಿರಾಗ್ ಎಸ್. ಕೆ ಅವರು ವಂದನಾರ್ಪಣೆ ಮಾಡಿ ಸಹಾಯ ಮಾಡಿದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ನಗರದ ಸಮಿತಿಯ ಅಧ್ಯಕ್ಷರಾದ ಅಭಿ.ಡಿ, ಮೈಸೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಪ್ರಜ್ವಲ್ ಟಿ, ಮೈಸೂರು ವಿಶ್ವವಿದ್ಯಾನಿಲಯ ಘಟಕದ ಚಿರಾಗ್ ಎಸ್.ಕೆ, ಸಂತೋಷ್ ಜಾಧವ್, ಪವನ್ ಕುಮಾರ್, ಭರತ್ ಹಾಗೂ ಶಿವಕುಮಾರ್ ಅವರು ಭಾಗವಹಿಸಿದ್ದರು.

Ramesh Babu

Journalist

Recent Posts

MLC Election: ಮೊದಲ ಪ್ರಾಶಸ್ತ್ಯ ಮತ

ಕರ್ನಾಟಕ ವಿಧಾನ ಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆ ಫಲಿತಾಂಶ (ಮೊದಲ ಪ್ರಾಶಸ್ತ್ಯ ಮತ) INC ------- 1.…

41 minutes ago

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

11 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

14 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

1 day ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

1 day ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

1 day ago