ಗಾಂಧಿ ಮತ್ತು ಶಾಸ್ತ್ರಿ‌ಅವರ ಆದರ್ಶಗಳನ್ನ ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕು-ಜಿ.ಎಂ ನಾಗರಾಜು

ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಣೆಗಷ್ಟೇ ಸೀಮಿತಗೊಳಿಸಬಾರದು. ಅವರುಗಳು ತಮ್ಮ ಬದುಕಿನಲ್ಲಿ ನಂಬಿದ್ದ ಮತ್ತು ಅಳವಡಿಸಿಕೊಂಡಿದ್ದ ಆದರ್ಶಗಳನ್ನು  ಕಾರ್ಯರೂಪಕ್ಕೆ ತರುವುದು ಮುಖ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ನಗರದ ಮಹಾತ್ಮಗಾಂಧಿ ಪ್ರತಿಮೆಯ ಬಳಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಳ ಸಜ್ಜನಿಕೆ, ಪ್ರಾಮಾಣಿಕತೆ, ನುಡಿದಂತೆ ನಡೆದ ಮಹಾನ್ ವ್ಯಕ್ತಿಗಳು ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಆಗಿದ್ದಾರೆ.  ಭಾರತ ದೇಶದ ಜನರ ಬದುಕು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದ ಈ ಮಹಾನೀಯರು  ತಮ್ಮ ಜೀವನವನ್ನೇ  ದೇಶಕ್ಕಾಗಿ  ಸಮರ್ಪಿಕೊಂಡರು ಎಂದರು.

ಮಹಾತ್ಮಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶವೆಂದು ಹೇಳಿದರು. ಅಹಿಂಸೆ, ಶಾಂತಿ, ಸೌಹಾರ್ದತೆ, ದೇಶಪ್ರೇಮ, ತಾರತಮ್ಯ ನಿವಾರಣೆ ಮುಂತಾದ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಚಲವಾಗಿ  ಅಳವಡಿಕೊಂಡಿದ್ದರು. ಮಹಾತ್ಮಗಾಂಧೀಜಿಯವರ ವಿಚಾರಧಾರೆಗಳನ್ನು ಜಗತ್ತಿನ ಎಲ್ಲಾ ದೇಶಗಳು ಗೌರವಿಸುತ್ತವೆ. ಭಾರತ ಸ್ವಾತಂತ್ರ್ಯ ಹೋರಾಟಗಾರರಿಗೆ ಮಹಾತ್ಮಗಾಂಧಿ ಸ್ಫೂರ್ತಿಯಾಗಿದ್ದರು. ಭಾರತ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ತಮ್ಮದೇ ಚಿಂತನೆಯನ್ನು ಗಾಂಧೀಜಿ ಹೊಂದಿದ್ದರು.  ಮಾನವೀಯ ಮೌಲ್ಯಗಳನ್ನು ಹೊಂದಿರುವ ಮಹಾತ್ಮಗಾಂಧೀಜಿಯ ಆದರ್ಶಗಳು ಎಂದಿಗೂ ಪ್ರಸ್ತುತವಾಗುತ್ತವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್ ಮಾತನಾಡಿ,  ಮಹಾತ್ಮಗಾಂಧಿಯವರ ಚಿಂತನೆಗಳು ಇಂದಿನ ನಮ್ಮ ದೇಶದ ‌ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಆದರ್ಶಗಳು ಎಂದಿಗೂ ಅನುಕರಣೆಯ. ಉಪವಾಸ ಮತ್ತು ಅಸಹಕಾರ ಚಳುವಳಿಯ ಮೂಲಕ ಜಗತ್ತಿನ ಗಮನಸೆಳೆದವರು ಮಹಾತ್ಮಗಾಂಧೀಜಿ. ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದ ಮೂಲಕ ಭಾರತ ದೇಶದ ಅಭಿವೃದ್ಧಿ ಮತ್ತು ಆಡಳಿತ ವ್ಯವಸ್ಥಗೆ ಹೊಸ ಚೈತನ್ಯ ನೀಡಿದರು ಲಾಲ್ ಬಹದ್ದೂರ್ ಶಾಸ್ತ್ರಿ ಎಂದರು.

ಮಹಾತ್ಮಗಾಂಧೀಜಿ ಜಯಂತಿ ಪ್ರಯುಕ್ತ ಕನ್ನಡಪರ ಹೋರಾಟಗಾರ ನಾಗರಾಜು ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ಗೆಜ್ಜಗದಹಳ್ಳಿ ಮುನಿರಾಜು, ಷಫೀರ್,  ಹಣಬೆ ಚನ್ನೆಗೌಡ,  ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಜಗದೀಶ್,  ಭಗತ್ ಸಿಂಗ್ ಕ್ರೀಡಾಂಗಣದ ಗುಂಡಣ್ಣ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

7 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

8 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

10 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

12 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

14 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

19 hours ago