ಗಾಂಧಿ ಮತ್ತು ಶಾಸ್ತ್ರಿ‌ಅವರ ಆದರ್ಶಗಳನ್ನ ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕು-ಜಿ.ಎಂ ನಾಗರಾಜು

ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಣೆಗಷ್ಟೇ ಸೀಮಿತಗೊಳಿಸಬಾರದು. ಅವರುಗಳು ತಮ್ಮ ಬದುಕಿನಲ್ಲಿ ನಂಬಿದ್ದ ಮತ್ತು ಅಳವಡಿಸಿಕೊಂಡಿದ್ದ ಆದರ್ಶಗಳನ್ನು  ಕಾರ್ಯರೂಪಕ್ಕೆ ತರುವುದು ಮುಖ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ನಗರದ ಮಹಾತ್ಮಗಾಂಧಿ ಪ್ರತಿಮೆಯ ಬಳಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಳ ಸಜ್ಜನಿಕೆ, ಪ್ರಾಮಾಣಿಕತೆ, ನುಡಿದಂತೆ ನಡೆದ ಮಹಾನ್ ವ್ಯಕ್ತಿಗಳು ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಆಗಿದ್ದಾರೆ.  ಭಾರತ ದೇಶದ ಜನರ ಬದುಕು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದ ಈ ಮಹಾನೀಯರು  ತಮ್ಮ ಜೀವನವನ್ನೇ  ದೇಶಕ್ಕಾಗಿ  ಸಮರ್ಪಿಕೊಂಡರು ಎಂದರು.

ಮಹಾತ್ಮಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶವೆಂದು ಹೇಳಿದರು. ಅಹಿಂಸೆ, ಶಾಂತಿ, ಸೌಹಾರ್ದತೆ, ದೇಶಪ್ರೇಮ, ತಾರತಮ್ಯ ನಿವಾರಣೆ ಮುಂತಾದ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಚಲವಾಗಿ  ಅಳವಡಿಕೊಂಡಿದ್ದರು. ಮಹಾತ್ಮಗಾಂಧೀಜಿಯವರ ವಿಚಾರಧಾರೆಗಳನ್ನು ಜಗತ್ತಿನ ಎಲ್ಲಾ ದೇಶಗಳು ಗೌರವಿಸುತ್ತವೆ. ಭಾರತ ಸ್ವಾತಂತ್ರ್ಯ ಹೋರಾಟಗಾರರಿಗೆ ಮಹಾತ್ಮಗಾಂಧಿ ಸ್ಫೂರ್ತಿಯಾಗಿದ್ದರು. ಭಾರತ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ತಮ್ಮದೇ ಚಿಂತನೆಯನ್ನು ಗಾಂಧೀಜಿ ಹೊಂದಿದ್ದರು.  ಮಾನವೀಯ ಮೌಲ್ಯಗಳನ್ನು ಹೊಂದಿರುವ ಮಹಾತ್ಮಗಾಂಧೀಜಿಯ ಆದರ್ಶಗಳು ಎಂದಿಗೂ ಪ್ರಸ್ತುತವಾಗುತ್ತವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್ ಮಾತನಾಡಿ,  ಮಹಾತ್ಮಗಾಂಧಿಯವರ ಚಿಂತನೆಗಳು ಇಂದಿನ ನಮ್ಮ ದೇಶದ ‌ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಆದರ್ಶಗಳು ಎಂದಿಗೂ ಅನುಕರಣೆಯ. ಉಪವಾಸ ಮತ್ತು ಅಸಹಕಾರ ಚಳುವಳಿಯ ಮೂಲಕ ಜಗತ್ತಿನ ಗಮನಸೆಳೆದವರು ಮಹಾತ್ಮಗಾಂಧೀಜಿ. ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದ ಮೂಲಕ ಭಾರತ ದೇಶದ ಅಭಿವೃದ್ಧಿ ಮತ್ತು ಆಡಳಿತ ವ್ಯವಸ್ಥಗೆ ಹೊಸ ಚೈತನ್ಯ ನೀಡಿದರು ಲಾಲ್ ಬಹದ್ದೂರ್ ಶಾಸ್ತ್ರಿ ಎಂದರು.

ಮಹಾತ್ಮಗಾಂಧೀಜಿ ಜಯಂತಿ ಪ್ರಯುಕ್ತ ಕನ್ನಡಪರ ಹೋರಾಟಗಾರ ನಾಗರಾಜು ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ಗೆಜ್ಜಗದಹಳ್ಳಿ ಮುನಿರಾಜು, ಷಫೀರ್,  ಹಣಬೆ ಚನ್ನೆಗೌಡ,  ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಜಗದೀಶ್,  ಭಗತ್ ಸಿಂಗ್ ಕ್ರೀಡಾಂಗಣದ ಗುಂಡಣ್ಣ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

16 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago