ಗಾಂಧಿ ಮತ್ತು ಶಾಸ್ತ್ರಿ‌ಅವರ ಆದರ್ಶಗಳನ್ನ ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕು-ಜಿ.ಎಂ ನಾಗರಾಜು

ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಣೆಗಷ್ಟೇ ಸೀಮಿತಗೊಳಿಸಬಾರದು. ಅವರುಗಳು ತಮ್ಮ ಬದುಕಿನಲ್ಲಿ ನಂಬಿದ್ದ ಮತ್ತು ಅಳವಡಿಸಿಕೊಂಡಿದ್ದ ಆದರ್ಶಗಳನ್ನು  ಕಾರ್ಯರೂಪಕ್ಕೆ ತರುವುದು ಮುಖ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ನಗರದ ಮಹಾತ್ಮಗಾಂಧಿ ಪ್ರತಿಮೆಯ ಬಳಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಳ ಸಜ್ಜನಿಕೆ, ಪ್ರಾಮಾಣಿಕತೆ, ನುಡಿದಂತೆ ನಡೆದ ಮಹಾನ್ ವ್ಯಕ್ತಿಗಳು ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಆಗಿದ್ದಾರೆ.  ಭಾರತ ದೇಶದ ಜನರ ಬದುಕು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದ ಈ ಮಹಾನೀಯರು  ತಮ್ಮ ಜೀವನವನ್ನೇ  ದೇಶಕ್ಕಾಗಿ  ಸಮರ್ಪಿಕೊಂಡರು ಎಂದರು.

ಮಹಾತ್ಮಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶವೆಂದು ಹೇಳಿದರು. ಅಹಿಂಸೆ, ಶಾಂತಿ, ಸೌಹಾರ್ದತೆ, ದೇಶಪ್ರೇಮ, ತಾರತಮ್ಯ ನಿವಾರಣೆ ಮುಂತಾದ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಚಲವಾಗಿ  ಅಳವಡಿಕೊಂಡಿದ್ದರು. ಮಹಾತ್ಮಗಾಂಧೀಜಿಯವರ ವಿಚಾರಧಾರೆಗಳನ್ನು ಜಗತ್ತಿನ ಎಲ್ಲಾ ದೇಶಗಳು ಗೌರವಿಸುತ್ತವೆ. ಭಾರತ ಸ್ವಾತಂತ್ರ್ಯ ಹೋರಾಟಗಾರರಿಗೆ ಮಹಾತ್ಮಗಾಂಧಿ ಸ್ಫೂರ್ತಿಯಾಗಿದ್ದರು. ಭಾರತ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ತಮ್ಮದೇ ಚಿಂತನೆಯನ್ನು ಗಾಂಧೀಜಿ ಹೊಂದಿದ್ದರು.  ಮಾನವೀಯ ಮೌಲ್ಯಗಳನ್ನು ಹೊಂದಿರುವ ಮಹಾತ್ಮಗಾಂಧೀಜಿಯ ಆದರ್ಶಗಳು ಎಂದಿಗೂ ಪ್ರಸ್ತುತವಾಗುತ್ತವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್ ಮಾತನಾಡಿ,  ಮಹಾತ್ಮಗಾಂಧಿಯವರ ಚಿಂತನೆಗಳು ಇಂದಿನ ನಮ್ಮ ದೇಶದ ‌ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಆದರ್ಶಗಳು ಎಂದಿಗೂ ಅನುಕರಣೆಯ. ಉಪವಾಸ ಮತ್ತು ಅಸಹಕಾರ ಚಳುವಳಿಯ ಮೂಲಕ ಜಗತ್ತಿನ ಗಮನಸೆಳೆದವರು ಮಹಾತ್ಮಗಾಂಧೀಜಿ. ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದ ಮೂಲಕ ಭಾರತ ದೇಶದ ಅಭಿವೃದ್ಧಿ ಮತ್ತು ಆಡಳಿತ ವ್ಯವಸ್ಥಗೆ ಹೊಸ ಚೈತನ್ಯ ನೀಡಿದರು ಲಾಲ್ ಬಹದ್ದೂರ್ ಶಾಸ್ತ್ರಿ ಎಂದರು.

ಮಹಾತ್ಮಗಾಂಧೀಜಿ ಜಯಂತಿ ಪ್ರಯುಕ್ತ ಕನ್ನಡಪರ ಹೋರಾಟಗಾರ ನಾಗರಾಜು ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ಗೆಜ್ಜಗದಹಳ್ಳಿ ಮುನಿರಾಜು, ಷಫೀರ್,  ಹಣಬೆ ಚನ್ನೆಗೌಡ,  ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಜಗದೀಶ್,  ಭಗತ್ ಸಿಂಗ್ ಕ್ರೀಡಾಂಗಣದ ಗುಂಡಣ್ಣ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago