ಗಾಂಧಿ ಮತ್ತು ಶಾಸ್ತ್ರಿ‌ಅವರ ಆದರ್ಶಗಳನ್ನ ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕು-ಜಿ.ಎಂ ನಾಗರಾಜು

ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಣೆಗಷ್ಟೇ ಸೀಮಿತಗೊಳಿಸಬಾರದು. ಅವರುಗಳು ತಮ್ಮ ಬದುಕಿನಲ್ಲಿ ನಂಬಿದ್ದ ಮತ್ತು ಅಳವಡಿಸಿಕೊಂಡಿದ್ದ ಆದರ್ಶಗಳನ್ನು  ಕಾರ್ಯರೂಪಕ್ಕೆ ತರುವುದು ಮುಖ್ಯವೆಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ನಗರದ ಮಹಾತ್ಮಗಾಂಧಿ ಪ್ರತಿಮೆಯ ಬಳಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಳ ಸಜ್ಜನಿಕೆ, ಪ್ರಾಮಾಣಿಕತೆ, ನುಡಿದಂತೆ ನಡೆದ ಮಹಾನ್ ವ್ಯಕ್ತಿಗಳು ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಆಗಿದ್ದಾರೆ.  ಭಾರತ ದೇಶದ ಜನರ ಬದುಕು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದ ಈ ಮಹಾನೀಯರು  ತಮ್ಮ ಜೀವನವನ್ನೇ  ದೇಶಕ್ಕಾಗಿ  ಸಮರ್ಪಿಕೊಂಡರು ಎಂದರು.

ಮಹಾತ್ಮಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶವೆಂದು ಹೇಳಿದರು. ಅಹಿಂಸೆ, ಶಾಂತಿ, ಸೌಹಾರ್ದತೆ, ದೇಶಪ್ರೇಮ, ತಾರತಮ್ಯ ನಿವಾರಣೆ ಮುಂತಾದ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಚಲವಾಗಿ  ಅಳವಡಿಕೊಂಡಿದ್ದರು. ಮಹಾತ್ಮಗಾಂಧೀಜಿಯವರ ವಿಚಾರಧಾರೆಗಳನ್ನು ಜಗತ್ತಿನ ಎಲ್ಲಾ ದೇಶಗಳು ಗೌರವಿಸುತ್ತವೆ. ಭಾರತ ಸ್ವಾತಂತ್ರ್ಯ ಹೋರಾಟಗಾರರಿಗೆ ಮಹಾತ್ಮಗಾಂಧಿ ಸ್ಫೂರ್ತಿಯಾಗಿದ್ದರು. ಭಾರತ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ತಮ್ಮದೇ ಚಿಂತನೆಯನ್ನು ಗಾಂಧೀಜಿ ಹೊಂದಿದ್ದರು.  ಮಾನವೀಯ ಮೌಲ್ಯಗಳನ್ನು ಹೊಂದಿರುವ ಮಹಾತ್ಮಗಾಂಧೀಜಿಯ ಆದರ್ಶಗಳು ಎಂದಿಗೂ ಪ್ರಸ್ತುತವಾಗುತ್ತವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್ ಮಾತನಾಡಿ,  ಮಹಾತ್ಮಗಾಂಧಿಯವರ ಚಿಂತನೆಗಳು ಇಂದಿನ ನಮ್ಮ ದೇಶದ ‌ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಆದರ್ಶಗಳು ಎಂದಿಗೂ ಅನುಕರಣೆಯ. ಉಪವಾಸ ಮತ್ತು ಅಸಹಕಾರ ಚಳುವಳಿಯ ಮೂಲಕ ಜಗತ್ತಿನ ಗಮನಸೆಳೆದವರು ಮಹಾತ್ಮಗಾಂಧೀಜಿ. ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದ ಮೂಲಕ ಭಾರತ ದೇಶದ ಅಭಿವೃದ್ಧಿ ಮತ್ತು ಆಡಳಿತ ವ್ಯವಸ್ಥಗೆ ಹೊಸ ಚೈತನ್ಯ ನೀಡಿದರು ಲಾಲ್ ಬಹದ್ದೂರ್ ಶಾಸ್ತ್ರಿ ಎಂದರು.

ಮಹಾತ್ಮಗಾಂಧೀಜಿ ಜಯಂತಿ ಪ್ರಯುಕ್ತ ಕನ್ನಡಪರ ಹೋರಾಟಗಾರ ನಾಗರಾಜು ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ಗೆಜ್ಜಗದಹಳ್ಳಿ ಮುನಿರಾಜು, ಷಫೀರ್,  ಹಣಬೆ ಚನ್ನೆಗೌಡ,  ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಜಗದೀಶ್,  ಭಗತ್ ಸಿಂಗ್ ಕ್ರೀಡಾಂಗಣದ ಗುಂಡಣ್ಣ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

8 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago