Categories: Home

ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಅಂಗವಾಗಿ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ,  ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಈ ದೇಶ ಕಂಡ ಅಪ್ರತಿಮ ನಾಯಕ.  ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಡೆಸಿದ್ದ ಮಹಾತ್ಮ ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಜೀವನಚರಿತ್ರೆ, ಹೋರಾಟ, ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ .

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ.ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

5 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

9 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

11 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

13 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

16 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago