ಸತ್ಯ, ಅಹಿಂಸೆಯನ್ನು ಮಹಾತ್ಮ ಗಾಂದೀಜಿ ಅನುಸರಿಸಿದ ಪ್ರಬಲ ಅಸ್ತ್ರಗಳಾಗಿದ್ದು, ಗಾಂಧೀಜಿ ತತ್ವಾದರ್ಶಗಳ ರೂಢಿಸಿಕೊಂಡರೆ ಸಮಾಜದಲ್ಲಿ ಪೊಲೀಸ್ ಠಾಣೆಗಳ ಅವಶ್ಯಕತೆಯೇ ಇರುವುದಿಲ್ಲ. ಆದರೆ, ಒಂದು ಕಡೆ ಗಾಂಧೀಜಿ ಅವರ ನುಡಿಗಳನ್ನು ಹೇಳುತ್ತಾ ಅದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿರುವುದು ದುರಂತದ ಸಂಗತಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕಾ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು.
ನಗರದ ಎ.ಬಿ.ಎಂ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ನಡೆದ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಧೂಮಪಾನ, ಮದ್ಯಪಾನ ಮೊದಲಾದ ದುಶ್ಚಟಗಳನ್ನು ತ್ಯಜಿಸುವ ಕುರಿತು ಮಾತಿನಲ್ಲಿಯೇ ಹೊರತು ಅನುಷ್ಟಾನಕ್ಕೆ ಬರುತ್ತಿಲ್ಲ. ಗಾಂಧೀಜಿ ತತ್ವಾದರ್ಶಗಳನ್ನು ಅನುಸರಿಸಿದರೆ ಈ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ. 12 ನೇ ಶತಮಾನದಲ್ಲಿ ಬಸವಣ್ಣನವರ ವಚನಗಳ ಸಾರವನ್ನು ಅರಿತರೆ, ಯಾವುದೇ ಕಾನೂನಿನ ಸೆಕ್ಷನ್ಗಳು ಬೇಕಿರಲಿಲ್ಲ. ಇಂದಿನ ಒತ್ತಡದ ಬದುಕಿನಲ್ಲಿ ಕುಡಿತಕ್ಕೆ ದಾಸರಾಗುತ್ತಿರುವುದು ಸಾಮಾನ್ಯವಾಗಿದ್ದು, ಆರೋಗ್ಯ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಈ ದುಶ್ಚಟಗಳಿಂದ ಹೊರಬರಬೇಕಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳು ಪ್ರಭಾವಶಾಲಿಯಾಗಿವೆ. ಮದ್ಯಮುಕ್ತ ಸಮಾಜದ ನಿರ್ಮಾಣದಿಂದ ಗಾಂಧಿ ಕನಸು ನನಸಾಗಿಸಬೇಕಿದೆ ಎಂದರು.
ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ನಮ್ಮಲ್ಲಿನ ಕೆಟ್ಟ ಭಾವನೆಗಳನ್ನು ಹೊರದೂಡಿ ಸದ್ಭಾವನೆಯನ್ನು ಬೆಳೆಸಿಕೊಳ್ಳಬೇಕು. ಗಾಂಧೀಜಿ ಅವರ ಉಜ್ವಲ ಭಾರತದ ಕನಸನ್ನು ನನಸಾಗಿಸುವಲ್ಲಿ ದುಶ್ಚಟಗಳಿಂದ ದೂರ ಇರಬೇಕು ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಪ್ರಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿದ್ದು, ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ 719 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಲಾಗುತ್ತಿದೆ ಎಂದರು.
ಈ ವೇಳೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟೀ ವಿ.ರಾಮಸ್ವಾಮಿ, ಜಿಲ್ಲಾ ಅಧ್ಯಕ್ಷ ಟಿ.ವೆಂಕಟೇಶ್, ಉಪಾಧ್ಯಕ್ಷ ವಿ.ನರಸಿಂಹರಾಜು, ಮುಖಂಡರಾದ ಟಿ.ಜಿ.ಮಂಜುನಾಥ್, ರವಿ, ಕೆಂಪಣ್ಣ,ಟಿ.ಮುನಿರಾಜು, ಕೆ.ಮಹಾಲಿಂಗಯ್ಯ, ಶಿಕ್ಷಕ ಎಂ.ಎಸ್.ರಾಜಶೇಖರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ವಿ.ನಂಜುಂಡೇಶ್ವರಸ್ವಾಮಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ ಮೊದಲಾದವರು ಹಾಜರಿದ್ದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…