ಗಾಂಧೀಜಿ ಉಜ್ವಲ ಭಾರತದ ಕನಸನ್ನು ನನಸಾಗಿಸಲು ದುಶ್ಚಟಗಳಿಂದ ದೂರ ಇರಬೇಕು-ದಿವ್ಯಜ್ಞಾನಾನಂದ ಸ್ವಾಮೀಜಿ

ಸತ್ಯ, ಅಹಿಂಸೆಯನ್ನು ಮಹಾತ್ಮ ಗಾಂದೀಜಿ ಅನುಸರಿಸಿದ ಪ್ರಬಲ ಅಸ್ತ್ರಗಳಾಗಿದ್ದು, ಗಾಂಧೀಜಿ ತತ್ವಾದರ್ಶಗಳ ರೂಢಿಸಿಕೊಂಡರೆ ಸಮಾಜದಲ್ಲಿ ಪೊಲೀಸ್‌ ಠಾಣೆಗಳ ಅವಶ್ಯಕತೆಯೇ ಇರುವುದಿಲ್ಲ. ಆದರೆ, ಒಂದು ಕಡೆ ಗಾಂಧೀಜಿ ಅವರ ನುಡಿಗಳನ್ನು ಹೇಳುತ್ತಾ ಅದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿರುವುದು ದುರಂತದ ಸಂಗತಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕಾ ಸಂಶೋಧನಾ ಪರಿಷತ್‌ ಅಧ್ಯಕ್ಷ ಹುಲಿಕಲ್‌ ನಟರಾಜ್‌ ಹೇಳಿದರು.

ನಗರದ ಎ.ಬಿ.ಎಂ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ನಡೆದ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಧೂಮಪಾನ, ಮದ್ಯಪಾನ ಮೊದಲಾದ ದುಶ್ಚಟಗಳನ್ನು ತ್ಯಜಿಸುವ ಕುರಿತು ಮಾತಿನಲ್ಲಿಯೇ ಹೊರತು ಅನುಷ್ಟಾನಕ್ಕೆ ಬರುತ್ತಿಲ್ಲ. ಗಾಂಧೀಜಿ ತತ್ವಾದರ್ಶಗಳನ್ನು ಅನುಸರಿಸಿದರೆ ಈ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ. 12 ನೇ ಶತಮಾನದಲ್ಲಿ ಬಸವಣ್ಣನವರ ವಚನಗಳ ಸಾರವನ್ನು ಅರಿತರೆ, ಯಾವುದೇ ಕಾನೂನಿನ ಸೆಕ್ಷನ್‌ಗಳು ಬೇಕಿರಲಿಲ್ಲ. ಇಂದಿನ ಒತ್ತಡದ ಬದುಕಿನಲ್ಲಿ ಕುಡಿತಕ್ಕೆ ದಾಸರಾಗುತ್ತಿರುವುದು ಸಾಮಾನ್ಯವಾಗಿದ್ದು, ಆರೋಗ್ಯ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಈ ದುಶ್ಚಟಗಳಿಂದ ಹೊರಬರಬೇಕಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳು ಪ್ರಭಾವಶಾಲಿಯಾಗಿವೆ. ಮದ್ಯಮುಕ್ತ ಸಮಾಜದ ನಿರ್ಮಾಣದಿಂದ ಗಾಂಧಿ ಕನಸು ನನಸಾಗಿಸಬೇಕಿದೆ ಎಂದರು.

ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ನಮ್ಮಲ್ಲಿನ ಕೆಟ್ಟ ಭಾವನೆಗಳನ್ನು ಹೊರದೂಡಿ ಸದ್ಭಾವನೆಯನ್ನು ಬೆಳೆಸಿಕೊಳ್ಳಬೇಕು. ಗಾಂಧೀಜಿ ಅವರ ಉಜ್ವಲ ಭಾರತದ ಕನಸನ್ನು ನನಸಾಗಿಸುವಲ್ಲಿ ದುಶ್ಚಟಗಳಿಂದ ದೂರ ಇರಬೇಕು ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಪ್ರಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿದ್ದು, ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ 719 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಲಾಗುತ್ತಿದೆ ಎಂದರು.

ಈ ವೇಳೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಸ್‌.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟೀ ವಿ.ರಾಮಸ್ವಾಮಿ, ಜಿಲ್ಲಾ ಅಧ್ಯಕ್ಷ ಟಿ.ವೆಂಕಟೇಶ್, ಉಪಾಧ್ಯಕ್ಷ ವಿ.ನರಸಿಂಹರಾಜು, ಮುಖಂಡರಾದ ಟಿ.ಜಿ.ಮಂಜುನಾಥ್, ರವಿ, ಕೆಂಪಣ್ಣ,ಟಿ.ಮುನಿರಾಜು, ಕೆ.ಮಹಾಲಿಂಗಯ್ಯ, ಶಿಕ್ಷಕ ಎಂ.ಎಸ್‌.ರಾಜಶೇಖರ್, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಎಸ್‌.ವಿ.ನಂಜುಂಡೇಶ್ವರಸ್ವಾಮಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

19 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago