ಗಾಂಧೀಜಿ ಉಜ್ವಲ ಭಾರತದ ಕನಸನ್ನು ನನಸಾಗಿಸಲು ದುಶ್ಚಟಗಳಿಂದ ದೂರ ಇರಬೇಕು-ದಿವ್ಯಜ್ಞಾನಾನಂದ ಸ್ವಾಮೀಜಿ

ಸತ್ಯ, ಅಹಿಂಸೆಯನ್ನು ಮಹಾತ್ಮ ಗಾಂದೀಜಿ ಅನುಸರಿಸಿದ ಪ್ರಬಲ ಅಸ್ತ್ರಗಳಾಗಿದ್ದು, ಗಾಂಧೀಜಿ ತತ್ವಾದರ್ಶಗಳ ರೂಢಿಸಿಕೊಂಡರೆ ಸಮಾಜದಲ್ಲಿ ಪೊಲೀಸ್‌ ಠಾಣೆಗಳ ಅವಶ್ಯಕತೆಯೇ ಇರುವುದಿಲ್ಲ. ಆದರೆ, ಒಂದು ಕಡೆ ಗಾಂಧೀಜಿ ಅವರ ನುಡಿಗಳನ್ನು ಹೇಳುತ್ತಾ ಅದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿರುವುದು ದುರಂತದ ಸಂಗತಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕಾ ಸಂಶೋಧನಾ ಪರಿಷತ್‌ ಅಧ್ಯಕ್ಷ ಹುಲಿಕಲ್‌ ನಟರಾಜ್‌ ಹೇಳಿದರು.

ನಗರದ ಎ.ಬಿ.ಎಂ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ನಡೆದ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಧೂಮಪಾನ, ಮದ್ಯಪಾನ ಮೊದಲಾದ ದುಶ್ಚಟಗಳನ್ನು ತ್ಯಜಿಸುವ ಕುರಿತು ಮಾತಿನಲ್ಲಿಯೇ ಹೊರತು ಅನುಷ್ಟಾನಕ್ಕೆ ಬರುತ್ತಿಲ್ಲ. ಗಾಂಧೀಜಿ ತತ್ವಾದರ್ಶಗಳನ್ನು ಅನುಸರಿಸಿದರೆ ಈ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ. 12 ನೇ ಶತಮಾನದಲ್ಲಿ ಬಸವಣ್ಣನವರ ವಚನಗಳ ಸಾರವನ್ನು ಅರಿತರೆ, ಯಾವುದೇ ಕಾನೂನಿನ ಸೆಕ್ಷನ್‌ಗಳು ಬೇಕಿರಲಿಲ್ಲ. ಇಂದಿನ ಒತ್ತಡದ ಬದುಕಿನಲ್ಲಿ ಕುಡಿತಕ್ಕೆ ದಾಸರಾಗುತ್ತಿರುವುದು ಸಾಮಾನ್ಯವಾಗಿದ್ದು, ಆರೋಗ್ಯ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಈ ದುಶ್ಚಟಗಳಿಂದ ಹೊರಬರಬೇಕಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳು ಪ್ರಭಾವಶಾಲಿಯಾಗಿವೆ. ಮದ್ಯಮುಕ್ತ ಸಮಾಜದ ನಿರ್ಮಾಣದಿಂದ ಗಾಂಧಿ ಕನಸು ನನಸಾಗಿಸಬೇಕಿದೆ ಎಂದರು.

ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ನಮ್ಮಲ್ಲಿನ ಕೆಟ್ಟ ಭಾವನೆಗಳನ್ನು ಹೊರದೂಡಿ ಸದ್ಭಾವನೆಯನ್ನು ಬೆಳೆಸಿಕೊಳ್ಳಬೇಕು. ಗಾಂಧೀಜಿ ಅವರ ಉಜ್ವಲ ಭಾರತದ ಕನಸನ್ನು ನನಸಾಗಿಸುವಲ್ಲಿ ದುಶ್ಚಟಗಳಿಂದ ದೂರ ಇರಬೇಕು ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಪ್ರಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿದ್ದು, ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ 719 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಲಾಗುತ್ತಿದೆ ಎಂದರು.

ಈ ವೇಳೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಸ್‌.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟೀ ವಿ.ರಾಮಸ್ವಾಮಿ, ಜಿಲ್ಲಾ ಅಧ್ಯಕ್ಷ ಟಿ.ವೆಂಕಟೇಶ್, ಉಪಾಧ್ಯಕ್ಷ ವಿ.ನರಸಿಂಹರಾಜು, ಮುಖಂಡರಾದ ಟಿ.ಜಿ.ಮಂಜುನಾಥ್, ರವಿ, ಕೆಂಪಣ್ಣ,ಟಿ.ಮುನಿರಾಜು, ಕೆ.ಮಹಾಲಿಂಗಯ್ಯ, ಶಿಕ್ಷಕ ಎಂ.ಎಸ್‌.ರಾಜಶೇಖರ್, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಎಸ್‌.ವಿ.ನಂಜುಂಡೇಶ್ವರಸ್ವಾಮಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

18 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

20 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago