ಕೋಲಾರ: ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಪ್ರಯುಕ್ತ ನಗರದ ಟೇಕಲ್ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬುಧವಾರ ಸ್ವಚ್ಚತಾ ಹಾಗೂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಬಿಜೆಪಿ ಪಕ್ಷದಿಂದ ದೇಶಾದ್ಯಂತ ಹಮ್ಮಿಕೊಂಡಿದ್ದೇವೆ ಗಾಂಧೀಜಿಯವರ ಕನಸು ನನಸು ಮಾಡಲು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕರ್ತರು ವಿನೂತನ ಕಾರ್ಯಕ್ರಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿಯಾಗಿದ್ದು ಸ್ವದೇಶಿಯ ವಸ್ತುಗಳ ಬಳಕೆ, ಖಾದಿ, ಆತ್ಮನಿರ್ಭರತೆ, ಸರಳತೆ ಮತ್ತು ಶುಚಿತ್ವದ ಬಗ್ಗೆ ಅರಿವು ತರಲಾಗಿದೆ ಖಾದಿ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು ಮತ್ತು ಸ್ವಚ್ಚತೆಗೆ ಅಧ್ಯತೆ ನೀಡಬೇಕು ಮಹನೀಯರ ವಿಚಾರಗಳನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಖಜಾಂಚಿ ಮಹೇಶ್, ನಗರಾಧ್ಯಕ್ಷ ಸಾ.ಮಾ ಅನಿಲ್ ಕುಮಾರ್, ಮುಖಂಡರಾದ ಮಮತಾ, ಅಪ್ಪಿ ಮಂಜುನಾಥ್, ಲಾಲ್ ಚಾಂದ್, ಜೈನ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…